ಗದಗದಿಂದ ಹೊರಟು ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ಬರುವ ಅವರು, ಇಲ್ಲಿನ ಈಡಿಗರ ಭವನದಲ್ಲಿ ನಡೆಯುವ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.