ರಿಪ್ಪನ್ಪೇಟೆ: ಹೊಂಬುಜ ಸಮೀಪದ ಗುಂಡಿಬೈಲಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದು ಸಾಗರ ತಾಲ್ಲೂಕಿನ ಬರದಹಳ್ಳಿಯ ನಿವಾಸಿ ಹಾಲಸ್ವಾಮಿ ಗಾಯಗೊಂಡಿದ್ದಾರೆ.
ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿ, ಸಂತೈಸಿದರು. ಹೆಚ್ಚಿನ ಚಿಕಿತ್ಸೆಗೆ ತಮ್ಮದೇ ಬೆಂಗಾವಲು ಪಡೆಯ ವಾಹನದಲ್ಲಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.