ಸ್ಥಳೀಯ ಪಟ್ಟಣ ಪಂಚಾಯಿತಿಗೆ ಪಾವತಿಸಬೇಕಾದ ₹ 2 ಕೋಟಿತೆರಿಗೆಯನ್ನು ಕೆಪಿಸಿ ಬಾಕಿ ಉಳಿಸಿರುವ ಕ್ರಮ ಸರಿಯಲ್ಲ. ಈ ಬಗ್ಗೆ ತಾಂತ್ರಿಕ ತೊಂದರೆಗಳು ಇದ್ದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ ಸರಿಪಡಿಸಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಆಸ್ಪತ್ರೆ, ಶಾಲೆ, ಬಸ್, ಕುಡಿಯುವ ನೀರು ಇನ್ನಿತರೆ ಸೌಲಭ್ಯಗಳನ್ನು ಕೆಪಿಸಿ ಮುಂದುವರಿಸಬೇಕು. ಈ ವಿಚಾರದಲ್ಲಿ ಕೆಲವೊಂದು ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದು ಗಮನಕ್ಕೆ ಬಂದಿದೆ. ಈ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.