<p><strong>ಕಾರ್ಗಲ್:</strong> ನಾಡಿಗೆ ಬೆಳಕು ನೀಡುವಲ್ಲಿ ಮುಖ್ಯ ಪಾತ್ರ ವಹಿಸಿರುವ ಶರಾವತಿ ಕಣಿವೆ ಯೋಜನಾ ಪ್ರದೇಶದ ವಿದ್ಯುದಾಗಾರಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಉನ್ನತ ಮಟ್ಟದಲ್ಲಿರಿಸಬೇಕು ಎಂದು ಇಂಧನ ಸಚಿವ ವಿ.ಸುನಿಲ್ಕುಮಾರ್ ತಿಳಿಸಿದರು.</p>.<p>ಇಲ್ಲಿಗೆ ಸಮೀಪದ ಜೋಗದ ಕೆಪಿಸಿ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು.</p>.<p>‘ಜಲ ವಿದ್ಯುದಾಗಾರಗಳಿಂದ ಅತ್ಯಂತ ಕಡಿಮೆ ದರದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗಿದೆ. ಅತ್ಯಂತ ಎಚ್ಚರವಾಗಿ ನಿರ್ವಹಣೆ ಮಾಡುವ ಜವಾಬ್ದಾರಿ ಕಾರ್ಮಿಕ ವರ್ಗ ಮತ್ತು ಅಧಿಕಾರಿಗಳಿಗಿದೆ. ಇಲಾಖೆಗೆ ಸಂಬಂಧಪಟ್ಟ ಕುಂದುಕೊರತೆಗಳ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸರಿಪಡಿಸಲಾಗುವುದು’ ಎಂದು ತಿಳಿಸಿದರು.</p>.<p>ಸ್ಥಳೀಯ ಪಟ್ಟಣ ಪಂಚಾಯಿತಿಗೆ ಪಾವತಿಸಬೇಕಾದ ₹ 2 ಕೋಟಿತೆರಿಗೆಯನ್ನು ಕೆಪಿಸಿ ಬಾಕಿ ಉಳಿಸಿರುವ ಕ್ರಮ ಸರಿಯಲ್ಲ. ಈ ಬಗ್ಗೆ ತಾಂತ್ರಿಕ ತೊಂದರೆಗಳು ಇದ್ದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ ಸರಿಪಡಿಸಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಆಸ್ಪತ್ರೆ, ಶಾಲೆ, ಬಸ್, ಕುಡಿಯುವ ನೀರು ಇನ್ನಿತರೆ ಸೌಲಭ್ಯಗಳನ್ನು ಕೆಪಿಸಿ ಮುಂದುವರಿಸಬೇಕು. ಈ ವಿಚಾರದಲ್ಲಿ ಕೆಲವೊಂದು ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದು ಗಮನಕ್ಕೆ ಬಂದಿದೆ. ಈ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.</p>.<p>‘ಕೆಪಿಸಿಯ ನಿರುಪಯುಕ್ತವಾಗಿ ಉಳಿದಿರುವ ವಸತಿ ಗೃಹಗಳನ್ನು ಪಟ್ಟಣ ಪಂಚಾಯಿತಿ, ಶಿಕ್ಷಕರು ಹೀಗೆ ಬೇರೆ ಬೇರೆ ಇಲಾಖೆಯ ಉದ್ಯೋಗಿಗಳಿಗೆ ನೀಡಿದರೆ ಉಪಯುಕ್ತವಾಗುತ್ತದೆ. ವಿದ್ಯುತ್ ನಿಗಮದ ಭದ್ರತೆಗಾಗಿ ನಿಯೋಜನೆಗೊಂಡಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಯೋಧರಿಗೆ ಅಗತ್ಯವಾದ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಈ ಬಗ್ಗೆ ಇಂಧನ ಸಚಿವರು ಗಮನಹರಿಸಿ ಪೂರಕ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಗಲ್:</strong> ನಾಡಿಗೆ ಬೆಳಕು ನೀಡುವಲ್ಲಿ ಮುಖ್ಯ ಪಾತ್ರ ವಹಿಸಿರುವ ಶರಾವತಿ ಕಣಿವೆ ಯೋಜನಾ ಪ್ರದೇಶದ ವಿದ್ಯುದಾಗಾರಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಉನ್ನತ ಮಟ್ಟದಲ್ಲಿರಿಸಬೇಕು ಎಂದು ಇಂಧನ ಸಚಿವ ವಿ.ಸುನಿಲ್ಕುಮಾರ್ ತಿಳಿಸಿದರು.</p>.<p>ಇಲ್ಲಿಗೆ ಸಮೀಪದ ಜೋಗದ ಕೆಪಿಸಿ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು.</p>.<p>‘ಜಲ ವಿದ್ಯುದಾಗಾರಗಳಿಂದ ಅತ್ಯಂತ ಕಡಿಮೆ ದರದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗಿದೆ. ಅತ್ಯಂತ ಎಚ್ಚರವಾಗಿ ನಿರ್ವಹಣೆ ಮಾಡುವ ಜವಾಬ್ದಾರಿ ಕಾರ್ಮಿಕ ವರ್ಗ ಮತ್ತು ಅಧಿಕಾರಿಗಳಿಗಿದೆ. ಇಲಾಖೆಗೆ ಸಂಬಂಧಪಟ್ಟ ಕುಂದುಕೊರತೆಗಳ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸರಿಪಡಿಸಲಾಗುವುದು’ ಎಂದು ತಿಳಿಸಿದರು.</p>.<p>ಸ್ಥಳೀಯ ಪಟ್ಟಣ ಪಂಚಾಯಿತಿಗೆ ಪಾವತಿಸಬೇಕಾದ ₹ 2 ಕೋಟಿತೆರಿಗೆಯನ್ನು ಕೆಪಿಸಿ ಬಾಕಿ ಉಳಿಸಿರುವ ಕ್ರಮ ಸರಿಯಲ್ಲ. ಈ ಬಗ್ಗೆ ತಾಂತ್ರಿಕ ತೊಂದರೆಗಳು ಇದ್ದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ ಸರಿಪಡಿಸಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಆಸ್ಪತ್ರೆ, ಶಾಲೆ, ಬಸ್, ಕುಡಿಯುವ ನೀರು ಇನ್ನಿತರೆ ಸೌಲಭ್ಯಗಳನ್ನು ಕೆಪಿಸಿ ಮುಂದುವರಿಸಬೇಕು. ಈ ವಿಚಾರದಲ್ಲಿ ಕೆಲವೊಂದು ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದು ಗಮನಕ್ಕೆ ಬಂದಿದೆ. ಈ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.</p>.<p>‘ಕೆಪಿಸಿಯ ನಿರುಪಯುಕ್ತವಾಗಿ ಉಳಿದಿರುವ ವಸತಿ ಗೃಹಗಳನ್ನು ಪಟ್ಟಣ ಪಂಚಾಯಿತಿ, ಶಿಕ್ಷಕರು ಹೀಗೆ ಬೇರೆ ಬೇರೆ ಇಲಾಖೆಯ ಉದ್ಯೋಗಿಗಳಿಗೆ ನೀಡಿದರೆ ಉಪಯುಕ್ತವಾಗುತ್ತದೆ. ವಿದ್ಯುತ್ ನಿಗಮದ ಭದ್ರತೆಗಾಗಿ ನಿಯೋಜನೆಗೊಂಡಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಯೋಧರಿಗೆ ಅಗತ್ಯವಾದ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಈ ಬಗ್ಗೆ ಇಂಧನ ಸಚಿವರು ಗಮನಹರಿಸಿ ಪೂರಕ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>