<p><strong>ಭದ್ರಾವತಿ:</strong> ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದರು.</p>.<p>ತರಳಬಾಳು ಹುಣ್ಣಿಮೆ ಪ್ರಯುಕ್ತ ಇಲ್ಲಿನ ಭದ್ರಾ ಪ್ರೌಢಶಾಲೆ ವತಿಯಿಂದ ಆಯೋಜಿಸಿದ್ದ ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಮಕ್ಕಳಲ್ಲಿ ಲವಲವಿಕೆ ಮೂಡಲಿದೆ ಎಂದು ಹೇಳಿದರು.</p>.<p>ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್.ರವಿ, ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್.ಎಸ್.ಮಲ್ಲಿಕಾರ್ಜುನ, ಜಗದೀಶ್, ಚಂದ್ರಪ್ಪ, ಎ.ಎಸ್.ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ ಇದ್ದರು.</p>.<p>ಕ್ರೀಡಾಕೂಟದಲ್ಲಿ ಒಟ್ಟು 13 ಶಾಲೆಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿದ್ದವು. ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಲಿಂಗೇಗೌಡ, ಅಪೇಕ್ಷ ಮಂಜುನಾಥ್, ಸಿದ್ದಪ್ಪ ಸೇರಿ 20 ಜನರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದರು.</p>.<p>ತರಳಬಾಳು ಹುಣ್ಣಿಮೆ ಪ್ರಯುಕ್ತ ಇಲ್ಲಿನ ಭದ್ರಾ ಪ್ರೌಢಶಾಲೆ ವತಿಯಿಂದ ಆಯೋಜಿಸಿದ್ದ ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಮಕ್ಕಳಲ್ಲಿ ಲವಲವಿಕೆ ಮೂಡಲಿದೆ ಎಂದು ಹೇಳಿದರು.</p>.<p>ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್.ರವಿ, ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್.ಎಸ್.ಮಲ್ಲಿಕಾರ್ಜುನ, ಜಗದೀಶ್, ಚಂದ್ರಪ್ಪ, ಎ.ಎಸ್.ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ ಇದ್ದರು.</p>.<p>ಕ್ರೀಡಾಕೂಟದಲ್ಲಿ ಒಟ್ಟು 13 ಶಾಲೆಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿದ್ದವು. ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಲಿಂಗೇಗೌಡ, ಅಪೇಕ್ಷ ಮಂಜುನಾಥ್, ಸಿದ್ದಪ್ಪ ಸೇರಿ 20 ಜನರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>