<p><strong>ಸಾಗರ: </strong>ಚಲನಚಿತ್ರ ಹಾಗೂ ರಂಗಭೂಮಿಯ ಅಭಿನಯ ಕಲೆಯಲ್ಲಿ ಉಮಾಶ್ರೀ ಅವರನ್ನು ಮೀರಿಸುವ ಕಲಾವಿದರು ವಿರಳ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p><p>ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಬೆಂಗಳೂರಿನ ರಂಗ ಸಂಪದ ಸಂಸ್ಥೆ ಸಾಗರದ ಸ್ಪಂದನ ರಂಗ ತಂಡದ ಸಹಯೋಗದಲ್ಲಿ ಆಯೋಜಿಸಿದ್ದ ‘ಶರ್ಮಿಷ್ಠೆ’ ಏಕವ್ಯಕ್ತಿ ರಂಗಪ್ರಯೋಗದ ನಂತರ ಉಮಾಶ್ರೀ ಅವರನ್ನು ಸನ್ಮಾನಿಸಿ ಮಾತನಾಡಿದರು. </p><p>ಪುರಾಣದ ಕತೆಯನ್ನು ವರ್ತಮಾನದ ಸಂದರ್ಭಕ್ಕೆ ಪ್ರಸ್ತುತಗೊಳಿಸುವ ರೀತಿಯಲ್ಲಿ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಅವರು ಅತ್ಯಂತ ಸಮರ್ಥವಾಗಿ ಶರ್ಮಿಷ್ಠೆ ಪ್ರಯೋಗವನ್ನು ರಂಗಕ್ಕೆ ಅಳವಡಿಸಿದ್ದಾರೆ. ಹಲವು ಪಾತ್ರಗಳನ್ನು ರಂಗದ ಮೇಲೆ ಅಭಿನಯಿಸುವ ಸವಾಲವನ್ನು ಉಮಾಶ್ರೀ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದರು. </p><p>ಚಲನಚಿತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೂ ಉಮಾಶ್ರೀ ಅವರು ರಂಗಭೂಮಿಯ ಮೂಲ ಸೆಳೆತವನ್ನು ಇನ್ನೂ ಉಳಿಸಿಕೊಂಡಿದ್ದಾರೆ ಎಂಬುದಕ್ಕೆ ಶರ್ಮಿಷ್ಠೆ ರಂಗಪ್ರಯೋಗ ಸಾಕ್ಷಿಯಾಗಿದೆ ಎಂದು ಸ್ಪಂದನ ರಂಗ ತಂಡದ ಎಂ.ವಿ.ಪ್ರತಿಭಾ ಹೇಳಿದರು.</p><p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಡಾ.ರಾಜನಂದಿನಿ ಕಾಗೋಡು, ಬಿ.ಟಾಕಪ್ಪ, ರಂಗ ಸಂಪದ ಸಂಸ್ಥೆಯ ಅಪ್ಪಯ್ಯ, ನಾಗೇಶ್, ಮೇಕಪ್ ರಾಮಕೃಷ್ಣ, ಚಂದ್ರಕಾಂತ್, ಶಿವಪ್ರಸಾದ್, ಅರುಣ್ ಮೂರ್ತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಚಲನಚಿತ್ರ ಹಾಗೂ ರಂಗಭೂಮಿಯ ಅಭಿನಯ ಕಲೆಯಲ್ಲಿ ಉಮಾಶ್ರೀ ಅವರನ್ನು ಮೀರಿಸುವ ಕಲಾವಿದರು ವಿರಳ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p><p>ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಬೆಂಗಳೂರಿನ ರಂಗ ಸಂಪದ ಸಂಸ್ಥೆ ಸಾಗರದ ಸ್ಪಂದನ ರಂಗ ತಂಡದ ಸಹಯೋಗದಲ್ಲಿ ಆಯೋಜಿಸಿದ್ದ ‘ಶರ್ಮಿಷ್ಠೆ’ ಏಕವ್ಯಕ್ತಿ ರಂಗಪ್ರಯೋಗದ ನಂತರ ಉಮಾಶ್ರೀ ಅವರನ್ನು ಸನ್ಮಾನಿಸಿ ಮಾತನಾಡಿದರು. </p><p>ಪುರಾಣದ ಕತೆಯನ್ನು ವರ್ತಮಾನದ ಸಂದರ್ಭಕ್ಕೆ ಪ್ರಸ್ತುತಗೊಳಿಸುವ ರೀತಿಯಲ್ಲಿ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಅವರು ಅತ್ಯಂತ ಸಮರ್ಥವಾಗಿ ಶರ್ಮಿಷ್ಠೆ ಪ್ರಯೋಗವನ್ನು ರಂಗಕ್ಕೆ ಅಳವಡಿಸಿದ್ದಾರೆ. ಹಲವು ಪಾತ್ರಗಳನ್ನು ರಂಗದ ಮೇಲೆ ಅಭಿನಯಿಸುವ ಸವಾಲವನ್ನು ಉಮಾಶ್ರೀ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದರು. </p><p>ಚಲನಚಿತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೂ ಉಮಾಶ್ರೀ ಅವರು ರಂಗಭೂಮಿಯ ಮೂಲ ಸೆಳೆತವನ್ನು ಇನ್ನೂ ಉಳಿಸಿಕೊಂಡಿದ್ದಾರೆ ಎಂಬುದಕ್ಕೆ ಶರ್ಮಿಷ್ಠೆ ರಂಗಪ್ರಯೋಗ ಸಾಕ್ಷಿಯಾಗಿದೆ ಎಂದು ಸ್ಪಂದನ ರಂಗ ತಂಡದ ಎಂ.ವಿ.ಪ್ರತಿಭಾ ಹೇಳಿದರು.</p><p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಡಾ.ರಾಜನಂದಿನಿ ಕಾಗೋಡು, ಬಿ.ಟಾಕಪ್ಪ, ರಂಗ ಸಂಪದ ಸಂಸ್ಥೆಯ ಅಪ್ಪಯ್ಯ, ನಾಗೇಶ್, ಮೇಕಪ್ ರಾಮಕೃಷ್ಣ, ಚಂದ್ರಕಾಂತ್, ಶಿವಪ್ರಸಾದ್, ಅರುಣ್ ಮೂರ್ತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>