<p><strong>ಶಿವಮೊಗ್ಗ: ‘ಅ</strong>ನವರತ ತಂಡದಿಂದ ವಿವೇಕ ವಿದ್ಯಾನಿಧಿಯಡಿ ನಗರ ವ್ಯಾಪ್ತಿಯ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<p>ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಹಾಗೂ ಪ್ರಥಮ ಪಿಯುಸಿಯಲ್ಲಿ ಶೇ 50 ರಿಂದ 75 ರಷ್ಟು ಅಂಕ ಪಡೆದಿರಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ವಿದ್ಯಾರ್ಥಿಗಳ ವಾರ್ಷಿಕ ಶಾಲಾ– ಕಾಲೇಜು ಶುಲ್ಕ ₹30,000ಕ್ಕಿಂತ ಕಡಿಮೆ ಇರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇಂತಹ ವಿದ್ಯಾರ್ಥಿಗಳು ₹5,000 ವಿದ್ಯಾರ್ಥಿವೇತನ ಪಡೆಯಲು ಅರ್ಹರು. ನೆಹರು ರಸ್ತೆಯ ಶಾಸಕರ ಭವನದಿಂದ ಅರ್ಜಿ ಪಡೆದು ಆಗಸ್ಟ್ 15ರೊಳಗೆ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ₹10 ನಿಗದಿಪಡಿಸಲಾಗಿದೆ ಎಂದುರು.</p>.<p>ನಗರ ವ್ಯಾಪ್ತಿ 110 ಪ್ರೌಢಶಾಲೆ, 38 ಪಿಯು ಕಾಲೇಜು ಸೇರಿ 13,825 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಅರ್ಹ 1,000 ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿ ಪಡೆಯಲು ಯಾವುದಾರೂ ಒಂದು ಗುರುತಿನ ಚೀಟಿ ಕಡ್ಡಾಯ ಎಂದರು.</p>.<p>ಬಿಜೆಪಿ ನಗರದ ಘಟಕ ಅಧ್ಯಕ್ಷ ಮೋಹನ್ ರೆಡ್ಡಿ, ನಾಗರಾಜ್, ಮೋಹನ್ ಶೆಟ್ಟಿ, ಪ್ರಭಾಕರ್, ನವೀನ್, ಪ್ರಿಯಾ, ಪೃಥ್ವಿ ಗೌಡ, ಜಗದೀಶ್, ಪ್ರಭುರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ‘ಅ</strong>ನವರತ ತಂಡದಿಂದ ವಿವೇಕ ವಿದ್ಯಾನಿಧಿಯಡಿ ನಗರ ವ್ಯಾಪ್ತಿಯ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<p>ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಹಾಗೂ ಪ್ರಥಮ ಪಿಯುಸಿಯಲ್ಲಿ ಶೇ 50 ರಿಂದ 75 ರಷ್ಟು ಅಂಕ ಪಡೆದಿರಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ವಿದ್ಯಾರ್ಥಿಗಳ ವಾರ್ಷಿಕ ಶಾಲಾ– ಕಾಲೇಜು ಶುಲ್ಕ ₹30,000ಕ್ಕಿಂತ ಕಡಿಮೆ ಇರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇಂತಹ ವಿದ್ಯಾರ್ಥಿಗಳು ₹5,000 ವಿದ್ಯಾರ್ಥಿವೇತನ ಪಡೆಯಲು ಅರ್ಹರು. ನೆಹರು ರಸ್ತೆಯ ಶಾಸಕರ ಭವನದಿಂದ ಅರ್ಜಿ ಪಡೆದು ಆಗಸ್ಟ್ 15ರೊಳಗೆ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ₹10 ನಿಗದಿಪಡಿಸಲಾಗಿದೆ ಎಂದುರು.</p>.<p>ನಗರ ವ್ಯಾಪ್ತಿ 110 ಪ್ರೌಢಶಾಲೆ, 38 ಪಿಯು ಕಾಲೇಜು ಸೇರಿ 13,825 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಅರ್ಹ 1,000 ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿ ಪಡೆಯಲು ಯಾವುದಾರೂ ಒಂದು ಗುರುತಿನ ಚೀಟಿ ಕಡ್ಡಾಯ ಎಂದರು.</p>.<p>ಬಿಜೆಪಿ ನಗರದ ಘಟಕ ಅಧ್ಯಕ್ಷ ಮೋಹನ್ ರೆಡ್ಡಿ, ನಾಗರಾಜ್, ಮೋಹನ್ ಶೆಟ್ಟಿ, ಪ್ರಭಾಕರ್, ನವೀನ್, ಪ್ರಿಯಾ, ಪೃಥ್ವಿ ಗೌಡ, ಜಗದೀಶ್, ಪ್ರಭುರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>