<p><strong>ಶಿವಮೊಗ್ಗ:</strong> ‘ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ ಅವರು ಮೊದಲ ಪ್ರಾಶಸ್ತ್ಯ ಮತದಲ್ಲಿಯೇ ಗೆಲುವು ಸಾಧಿಸಲಿದ್ದಾರೆ’ ಎಂದು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. </p>.<p>‘ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗಿದೆ. ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲು ಮುಂದಾಗಿದ್ದಾರೆ. ಮೈತ್ರಿ ಅಭ್ಯರ್ಥಿಗಳಿಗೆ ಈಗಾಗಲೇ ಸೋಲಿನ ಭಯ ಶುರುವಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>‘ಕಳೆದ ಬಾರಿ ಪವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ ಅವರು ಗೆದ್ದಿದ್ದರು. ಇದೀಗ ಅವರು ಈ ಬಾರಿ ಕಾಂಗ್ರೆಸ್ನಿಂದ ಚುನಾವಣೆ ಎದುರಿಸುತ್ತಿದ್ದಾರೆ. ಎಸ್.ಪಿ.ದಿನೇಶ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಟಿಕೆಟ್ ನೀಡಿದರೂ ಅವರು ಸೋಲು ಅನುಭವಿಸಿದ್ದಾರೆ. ಆದರೆ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ನಾಮಪತ್ರ ವಾಪಸ್ ಪಡೆಯುವಂತೆ ಪಕ್ಷದ ನಾಯಕರು ಮಾಡಿದ ಮನವಿಗೆ ಸ್ಪಂದಿಸಿಲ್ಲ. ದಿನೇಶ್ ಅವರು ಬಿಜೆಪಿಗೆ ಸಹಕಾರ ಮಾಡಲು ನಿಂತಂತೆ ಕಾಣುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿಲು ವಾರ್ಡ್ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಇದಲ್ಲದೇ ಪಕ್ಷದ ವತಿಯಿಂದ ಸಾಕಷ್ಟು ಮತದಾರರ ನೋಂದಣಿ ಕೂಡ ಮಾಡಿಸಲಾಗಿದೆ. ಹೀಗಾಗಿಯೇ ನಮಗೆ ಗೆಲ್ಲುವ ಎಲ್ಲ ರೀತಿಯ ಅವಕಾಶಗಳು ಇವೆ’ ಎಂದರು. </p>.<p>‘ಸರ್ಕಾರದಿಂದ ಈಗಾಗಲೇ ಯುವನಿಧಿ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ನಿರುದ್ಯೋಗಿ ಯುವಕರ ಖಾತೆಗೆ ₹ 3,000 ಜಮಾ ಮಾಡಲಾಗುತ್ತಿದೆ. ಇನ್ನು ಸರ್ಕಾರಿ ನೌಕರರ 7ನೇ ವೇತನ ಆಯೋಗದ ವರದಿ ಜಾರಿ ಸೇರಿ ಇನ್ನಿತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿದೆ. ಸರ್ಕಾರ ನುಡಿದಂತೆ ನಡೆಯುತ್ತಿದೆ’ ಎಂದು ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಜಿ.ಡಿ.ಮಂಜುನಾಥ, ಮಧು, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ ಅವರು ಮೊದಲ ಪ್ರಾಶಸ್ತ್ಯ ಮತದಲ್ಲಿಯೇ ಗೆಲುವು ಸಾಧಿಸಲಿದ್ದಾರೆ’ ಎಂದು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. </p>.<p>‘ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗಿದೆ. ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲು ಮುಂದಾಗಿದ್ದಾರೆ. ಮೈತ್ರಿ ಅಭ್ಯರ್ಥಿಗಳಿಗೆ ಈಗಾಗಲೇ ಸೋಲಿನ ಭಯ ಶುರುವಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>‘ಕಳೆದ ಬಾರಿ ಪವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ ಅವರು ಗೆದ್ದಿದ್ದರು. ಇದೀಗ ಅವರು ಈ ಬಾರಿ ಕಾಂಗ್ರೆಸ್ನಿಂದ ಚುನಾವಣೆ ಎದುರಿಸುತ್ತಿದ್ದಾರೆ. ಎಸ್.ಪಿ.ದಿನೇಶ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಟಿಕೆಟ್ ನೀಡಿದರೂ ಅವರು ಸೋಲು ಅನುಭವಿಸಿದ್ದಾರೆ. ಆದರೆ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ನಾಮಪತ್ರ ವಾಪಸ್ ಪಡೆಯುವಂತೆ ಪಕ್ಷದ ನಾಯಕರು ಮಾಡಿದ ಮನವಿಗೆ ಸ್ಪಂದಿಸಿಲ್ಲ. ದಿನೇಶ್ ಅವರು ಬಿಜೆಪಿಗೆ ಸಹಕಾರ ಮಾಡಲು ನಿಂತಂತೆ ಕಾಣುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿಲು ವಾರ್ಡ್ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಇದಲ್ಲದೇ ಪಕ್ಷದ ವತಿಯಿಂದ ಸಾಕಷ್ಟು ಮತದಾರರ ನೋಂದಣಿ ಕೂಡ ಮಾಡಿಸಲಾಗಿದೆ. ಹೀಗಾಗಿಯೇ ನಮಗೆ ಗೆಲ್ಲುವ ಎಲ್ಲ ರೀತಿಯ ಅವಕಾಶಗಳು ಇವೆ’ ಎಂದರು. </p>.<p>‘ಸರ್ಕಾರದಿಂದ ಈಗಾಗಲೇ ಯುವನಿಧಿ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ನಿರುದ್ಯೋಗಿ ಯುವಕರ ಖಾತೆಗೆ ₹ 3,000 ಜಮಾ ಮಾಡಲಾಗುತ್ತಿದೆ. ಇನ್ನು ಸರ್ಕಾರಿ ನೌಕರರ 7ನೇ ವೇತನ ಆಯೋಗದ ವರದಿ ಜಾರಿ ಸೇರಿ ಇನ್ನಿತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿದೆ. ಸರ್ಕಾರ ನುಡಿದಂತೆ ನಡೆಯುತ್ತಿದೆ’ ಎಂದು ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಜಿ.ಡಿ.ಮಂಜುನಾಥ, ಮಧು, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>