ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆಯಲ್ಲಿ ಮತಕ್ಕೆ ₹ 25 ಸಾವಿರ ಕೇಳ್ತಾರೆ ಎಂದಿದ್ದ ಬಿಎಸ್‌ವೈ: ಮಹಿಮ

Last Updated 6 ಡಿಸೆಂಬರ್ 2021, 14:27 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಮತಕ್ಕೆ ₹ 25 ಸಾವಿರ ಕೊಡುವ ಸ್ಥಿತಿ ಇರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಜೆಡಿಯು ಅಧ್ಯಕ್ಷ ಮಹಿಮ ಪಟೇಲ್‌ ಬಹಿರಂಗಪಡಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಶಿವಮೊಗ್ಗದಿಂದ ಯಡಿಯೂರಪ್ಪ ಅವರ ಜತೆ ಈಚೆಗೆ ಬೆಂಗಳೂರಿಗೆ ಪ್ರಯಾಣ ಮಾಡುವಾಗ ಈ ವಿಷಯ ಪ್ರಸ್ತಾಪಿಸಿದ್ದರು. ಮತದಾರರೇ ಭ್ರಷ್ಟರಾಗಿದ್ದಾರೆ ಎಂದು ಬೇಸರ ತೋಡಿಕೊಂಡಿದ್ದರು ಎಂದರು.

ಭಾರತದಲ್ಲಿ ಚುನಾವಣಾ ಸುಧಾರಣೆ ತರುವ ಆವಶ್ಯಕತೆ ಇದೆ. ಪ್ರಜೆಗಳು ಭ್ರಷ್ಟಾಚಾರಕ್ಕೆ ಮೊದಲ ಏಣಿ ಹಾಕಿಕೊಡುತ್ತಿದ್ದಾರೆ. ಉಚಿತವಾಗಿ ಏನು ಲಾಭ ಎನ್ನುವ ಯೋಚನೆಗಳು ಆರಂಭವಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT