ಸಾಗರ: ಇಲ್ಲಿನ ವೈದ್ಯ ಸಾಹಿತಿ ಡಾ.ಎಚ್.ಎಸ್.ಮೋಹನ್ ಅವರಿಗೆ 2019–20ನೇ ಸಾಲಿನ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ ಲಭ್ಯವಾಗಿದೆ.
ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ವೆಂಕಟಾಚಲಪತಿ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಅಣ್ಣಯ್ಯ ಕಲಾಲ್ ಉಳ್ತೂರು ನೇತೃತ್ವದ ಸಭೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆ ನಡೆದಿದೆ.
ಐಎಂಎ ಕನ್ನಡ ಬರಹಗಾರರ ಸಮಿತಿಯ ಕರ್ನಾಟಕ ರಾಜ್ಯ ಶಾಖೆ ಈ ಪ್ರಶಸ್ತಿ ನೀಡುತ್ತಿದ್ದು, ಅ. 3ರಂದು ಬೆಂಗಳೂರಿನಲ್ಲಿ ನಡೆಯುವ ಐಎಂಎ ವೈದ್ಯ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.