ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಶನಿವಾರ ಮಳೆಯ ಆರ್ಭಟ ಮುಂದುವರಿದಿದೆ. ಭದ್ರಾ ಜಲಾಶಯದ ನೀರಿನಮಟ್ಟ 24 ಗಂಟೆಗಳಲ್ಲಿ 2 ಅಡಿ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 29 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಸಾಗರ, ಶಿಕಾರಿಪುರ, ಸೊರಬ, ಶಿವಮೊಗ್ಗ, ಭದ್ರಾವತಿ ತಾಲ್ಲೂಕಿನಲ್ಲಿ ಶುಕ್ರವಾರ ಬಿಡುವು ನೀಡಿದ್ದ ಮಳೆ ಶನಿವಾರ ಬೆಳಿಗ್ಗೆಯಿಂದಲೇ ಚುರುಕುಗೊಂಡಿದೆ.
ಹುಲಿಕಲ್ನಲ್ಲಿ 10.8 ಸೆಂ.ಮೀ, ಮಾಸ್ತಿಕಟ್ಟೆಯಲ್ಲಿ 10.3 ಸೆಂ.ಮೀ ಹಾಗೂ ಆಗುಂಬೆಯಲ್ಲಿ 7.2 ಸೆಂ.ಮೀ. ಮಳೆ ಸುರಿದಿದೆ. ತುಂಗಾ ಜಲಾಶಯದಿಂದ 33,069 ಹರಿಸಲಾಗುತ್ತಿದ್ದು, ನದಿ ತುಂಬಿ ಹರಿಯುತ್ತಿದೆ. ಪ್ರವಾಹದ ಮುನ್ನೆಚ್ಚರಿಕೆಯಾಗಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.