<p><strong>ಶಿವಮೊಗ್ಗ:</strong> ಅಂಗವಿಕಲರು, ವಿಧವೆಯರು ಹಾಗೂ ವೃದ್ದೆಯರಿಗೆ ಹಲವುತಿಂಗಳಿನಿಂದ ಮಾಸಿಕ ಪಿಂಚಣಿಬಂದಿಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೇಜಸ್ವಿನಿ ಮಹಿಳಾ ಸಂಘದ ಸದಸ್ಯರು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆಮನವಿ ಸಲ್ಲಿಸಿದರು.</p>.<p>ನಿತ್ಯವೂ ತಾಲ್ಲೂಕು ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಂಚಣಿ ಹಣಕ್ಕಾಗಿ ತಾಲ್ಲೂಕು ಕಚೇರಿಗೆ ನಿತ್ಯ 50 ರಿಂದ 100 ಪಿಂಚಣಿದಾರರು ಸಾಲಾಗಿ ನಿಲ್ಲುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಯಾವುದೇ ಅಂತರ ಕಾಯ್ದುಕೊಳ್ಳ ನಿಲ್ಲುತ್ತಿದ್ದಾರೆ. ಎಲ್ಲ ದಾಖಲೆಗಳನ್ನು ಈ ಮೊದಲು ನೀಡಿದ್ದರೂ, ಅಧಿಕಾರಿಗಳು ಮತ್ತೆ ಮತ್ತೆ ದಾಖಲೆಗಳಿಗಾಗಿ ಓಡಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕೆಲವರಿಗೆ ಪಿಂಚಣಿ ಮಂಜೂರಾತಿ ಆದೇಶ ಬಂದು 15 ತಿಂಗಳಾಗಿದ್ದರೂ ತಾಲ್ಲೂಕು ಆಡಳಿತ ಪಿಂಚಣಿ ಬಿಡುಗಡೆ ಮಾಡಿಲ್ಲ. ಪಿಂಚಣಿ ನಂಬಿಕೊಂಡವರಿಗೆಜೀವನ ನಿರ್ವಹಣೆ ಕಷ್ಟವಾಗಿದೆಎಂದು ಅಳಲು ತೋಡಿಕೊಂಡರು.</p>.<p>ಸಂಘದ ಅಧ್ಯಕ್ಷೆ ಸೀತಾಲಕ್ಷ್ಮಿ ಸತ್ಯನಾರಾಯಣ, ಮಂಜುಳಾ ಪಾಂಡೆ, ಕಲ್ಪನಾ ರಮೇಶ್, ಭಾಗ್ಯ, ಸುಶೀಲಮ್ಮ, ಶಾಂತಮ್ಮಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಅಂಗವಿಕಲರು, ವಿಧವೆಯರು ಹಾಗೂ ವೃದ್ದೆಯರಿಗೆ ಹಲವುತಿಂಗಳಿನಿಂದ ಮಾಸಿಕ ಪಿಂಚಣಿಬಂದಿಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೇಜಸ್ವಿನಿ ಮಹಿಳಾ ಸಂಘದ ಸದಸ್ಯರು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆಮನವಿ ಸಲ್ಲಿಸಿದರು.</p>.<p>ನಿತ್ಯವೂ ತಾಲ್ಲೂಕು ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಂಚಣಿ ಹಣಕ್ಕಾಗಿ ತಾಲ್ಲೂಕು ಕಚೇರಿಗೆ ನಿತ್ಯ 50 ರಿಂದ 100 ಪಿಂಚಣಿದಾರರು ಸಾಲಾಗಿ ನಿಲ್ಲುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಯಾವುದೇ ಅಂತರ ಕಾಯ್ದುಕೊಳ್ಳ ನಿಲ್ಲುತ್ತಿದ್ದಾರೆ. ಎಲ್ಲ ದಾಖಲೆಗಳನ್ನು ಈ ಮೊದಲು ನೀಡಿದ್ದರೂ, ಅಧಿಕಾರಿಗಳು ಮತ್ತೆ ಮತ್ತೆ ದಾಖಲೆಗಳಿಗಾಗಿ ಓಡಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕೆಲವರಿಗೆ ಪಿಂಚಣಿ ಮಂಜೂರಾತಿ ಆದೇಶ ಬಂದು 15 ತಿಂಗಳಾಗಿದ್ದರೂ ತಾಲ್ಲೂಕು ಆಡಳಿತ ಪಿಂಚಣಿ ಬಿಡುಗಡೆ ಮಾಡಿಲ್ಲ. ಪಿಂಚಣಿ ನಂಬಿಕೊಂಡವರಿಗೆಜೀವನ ನಿರ್ವಹಣೆ ಕಷ್ಟವಾಗಿದೆಎಂದು ಅಳಲು ತೋಡಿಕೊಂಡರು.</p>.<p>ಸಂಘದ ಅಧ್ಯಕ್ಷೆ ಸೀತಾಲಕ್ಷ್ಮಿ ಸತ್ಯನಾರಾಯಣ, ಮಂಜುಳಾ ಪಾಂಡೆ, ಕಲ್ಪನಾ ರಮೇಶ್, ಭಾಗ್ಯ, ಸುಶೀಲಮ್ಮ, ಶಾಂತಮ್ಮಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>