ನಂದಿತಳೆಯ ಹೊಸೂರಿನ ಶಾಖೆಯ ಆವರಣದಲ್ಲಿ ಶನಿವಾರ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಗೋದಾಮು ಪೂಜೆ ಹಾಗೂ ಸಂಘದ ವಾರ್ಷಿಕ ಸಭೆ ನಡೆಸಲಾಗಿತ್ತು. ಕಾರ್ಯಕ್ರಮದ ನಂತರ ಉಪಾಹಾರ ನೀಡಲಾಗಿತ್ತು. ಉಪಾಹಾರ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ಹೊಟ್ಟೆನೋವು, ವಾಂತಿ, ಸುಸ್ತು ಕಾಣಿಸಿಕೊಂಡಿದೆ. ಕೆಲವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಖಾಸಗಿ ಕ್ಲಿನಿಕ್ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.