<p><strong>ಸಾಗರ: </strong>ಬಿಜೆಪಿ ಹಾಗೂ ಜೆಡಿಎಸ್ನ ಹೆಚ್ಚಿನ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸರ್ವಾಧಿಕಾರಿ ಧೋರಣೆಯಿಂದ ಆ ಪಕ್ಷದ ಬಹುತೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಜೆಡಿಎಸ್ ಒಡೆದ ಮನೆಯಾಗಿದ್ದು, ಅಲ್ಲಿನ ಶಾಸಕರೂ ಭ್ರಮ ನಿರಸನಗೊಂಡಿದ್ದಾರೆ ಎಂದರು. </p><p>ಸಾಗರ ಕ್ಷೇತ್ರದ ಕೆಲವು ಭಾಗಗಳಲ್ಲಿ ಆನೆ ದಾಳಿಯಿಂದ ರೈತರು ತೊಂದರೆ ಅನುಭವಿಸಿರುವ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಆನೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿದ್ದು ಅವರಿಗೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ. ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.</p><p>ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಉಮೇಶ್ ಮೊಗವೀರ ಅವರ ಚಿಕಿತ್ಸೆಗೆ ಬೇಳೂರು ₹25,000 ಸಹಾಯಧನ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಬಿಜೆಪಿ ಹಾಗೂ ಜೆಡಿಎಸ್ನ ಹೆಚ್ಚಿನ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸರ್ವಾಧಿಕಾರಿ ಧೋರಣೆಯಿಂದ ಆ ಪಕ್ಷದ ಬಹುತೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಜೆಡಿಎಸ್ ಒಡೆದ ಮನೆಯಾಗಿದ್ದು, ಅಲ್ಲಿನ ಶಾಸಕರೂ ಭ್ರಮ ನಿರಸನಗೊಂಡಿದ್ದಾರೆ ಎಂದರು. </p><p>ಸಾಗರ ಕ್ಷೇತ್ರದ ಕೆಲವು ಭಾಗಗಳಲ್ಲಿ ಆನೆ ದಾಳಿಯಿಂದ ರೈತರು ತೊಂದರೆ ಅನುಭವಿಸಿರುವ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಆನೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿದ್ದು ಅವರಿಗೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ. ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.</p><p>ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಉಮೇಶ್ ಮೊಗವೀರ ಅವರ ಚಿಕಿತ್ಸೆಗೆ ಬೇಳೂರು ₹25,000 ಸಹಾಯಧನ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>