<p><strong>ತುಮರಿ:</strong> ‘ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಇರುವುದರಿಂದ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಕಾಮಗಾರಿ ವಿಳಂಬವಾಗುತ್ತಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ತಾಲ್ಲೂಕಿನ ತುಮರಿ ಸಮೀಪದ ಹೊಳೆಬಾಗಿಲಿನ ತಟದಲ್ಲಿ ನಡೆಯುತ್ತಿರುವ ಬಹು ಕೋಟಿ ವೆಚ್ಚದ ‘ಸಿಗಂದೂರು ಸೇತುವೆ’ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದ್ದು, ಸುಮಾರು ₹423 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಯಲಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದರು.</p>.<p>ಸಂಸದರು ಹೊಳೆಬಾಗಿಲು ಲಾಂಚ್ನಲ್ಲಿಯೇ ಪ್ರಯಾಣಿಸಿ ಸೇತುವೆ ಕಾಮಗಾರಿ ಪ್ರಗತಿ ವೀಕ್ಷಿಸಿದರು. ಅವರು ಇದೇ ವೇಳೆ ರಾಣೆಬೇನ್ನೂರು– ಮರಕುಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766ರ ಡಿಪಿಆರ್ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕ ದಿವಾಕರ ಶೆಟ್ಟಿ, ಎಂಎಸ್ಐಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮರಿ:</strong> ‘ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಇರುವುದರಿಂದ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಕಾಮಗಾರಿ ವಿಳಂಬವಾಗುತ್ತಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ತಾಲ್ಲೂಕಿನ ತುಮರಿ ಸಮೀಪದ ಹೊಳೆಬಾಗಿಲಿನ ತಟದಲ್ಲಿ ನಡೆಯುತ್ತಿರುವ ಬಹು ಕೋಟಿ ವೆಚ್ಚದ ‘ಸಿಗಂದೂರು ಸೇತುವೆ’ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದ್ದು, ಸುಮಾರು ₹423 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಯಲಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದರು.</p>.<p>ಸಂಸದರು ಹೊಳೆಬಾಗಿಲು ಲಾಂಚ್ನಲ್ಲಿಯೇ ಪ್ರಯಾಣಿಸಿ ಸೇತುವೆ ಕಾಮಗಾರಿ ಪ್ರಗತಿ ವೀಕ್ಷಿಸಿದರು. ಅವರು ಇದೇ ವೇಳೆ ರಾಣೆಬೇನ್ನೂರು– ಮರಕುಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766ರ ಡಿಪಿಆರ್ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕ ದಿವಾಕರ ಶೆಟ್ಟಿ, ಎಂಎಸ್ಐಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>