ಶಿವಮೊಗ್ಗ-ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (ಶಿಮುಲ್) ವ್ಯಾಪ್ತಿಯಿಂದ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳನ್ನು ಬೇರ್ಪಡಿಸಿ ಹೊಸದಾಗಿ ಶಿವಮೊಗ್ಗ ಹಾಲು ಒಕ್ಕೂಟವನ್ನು ಪ್ರತ್ಯೇಕವಾಗಿ ಘೋಷಿಸಬೇಕು. ಶಿಮುಲ್ ಹಾಲಿನ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಲು ಬಜೆಟ್ನಲ್ಲಿ ₹ 50 ಕೋಟಿ ಅನುದಾನ ಮೀಸಲಿಡಬೇಕು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಶೋಧನಾ, ಕೌಶಲಾಭಿವೃದ್ಧಿ ಮತ್ತು ವಿಸ್ತರಣಾ ಕೇಂದ್ರ, ಉಡುಗಣಿ (ಉಡುತಡಿ), ಶಿಕಾರಿಪುರ ತಾಲ್ಲೂಕು ಇದಕ್ಕೆ ₹ 30 ಕೋಟಿ ವಿಶೇಷ ಅನುದಾನ ಮೀಸಲಿಡಬೇಕು. ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪನೆ ಆಗಿರುವ ಆಯುಷ್ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 100 ಕೋಟಿ ಅನುದಾನ ಮೀಸಲಿಟ್ಟು, ಆಯವ್ಯಯದಲ್ಲಿ ಘೋಷಣೆ ಮಾಡಬೇಕು ಎಂದರು.