<p><strong>ಆನವಟ್ಟಿ:</strong> ಸೊರಬ, ಆನವಟ್ಟಿ, ಶಿರಾಳಕೊಪ್ಪಕ್ಕೆ ಶರಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯು ಕೇಂದ್ರ ಸರ್ಕಾರದ ಶೇ60 ಹಾಗೂ ರಾಜ್ಯ ಸರ್ಕಾರದ ಶೇ 40 ರಷ್ಟು ಅನುದಾನದಲ್ಲಿ ಸಿದ್ಧವಾಗಿದೆ. ಟೆಂಡರ್ ಆಗಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ನೀರು ಪೂರೈಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. </p>.<p>ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ವಿಕಸಿತ ಭಾರತದ ಅಮೃತ ಕಾಲ ಸಂಕಲ್ಪ’ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. </p>.<p>ಮಡಿವಾಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು ಮಾತನಾಡಿ, ‘ಮೋದಿ ಅವರಿಂದ ಭಾರತ ವಿಕಸಿತ ಆದಂತೆ, ಸಂಸದ ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗ ಜಿಲ್ಲೆ ವಿಕಸಿತವಾಗಿದೆ’ ಎಂದರು. </p>.<p>‘ಬಿಜೆಪಿ ಆಡಳಿತದಲ್ಲಿ ನಿರ್ಮಾಣ ಮಾಡಿರುವ ಕೆಎಸ್ಆರ್ಟಿ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಸೊರಬ ತಾಲ್ಲೂಕಿನಿಂದ ಆಯ್ಕೆಯಾಗಿರುವ ಸಚಿವರಿಗೆ ಸಾಧ್ಯವಾಗಿಲ್ಲ. ಗ್ಯಾರಂಟಿಗಳ ಜಪದಲ್ಲಿ ತಾಲ್ಲೂಕಿನ ಹದಗೆಟ್ಟ ರಸ್ತೆಗಳ ಗುಂಡಿ ಮುಚ್ಚಲು ಅವರಿಗೆ ಸಾಧ್ಯವಾಗಿಲ್ಲ’ ಎಂದು ಹೇಳಿದರು. </p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಮುಖಂಡರಾದ ಮೇಘರಾಜ್, ಕೊಟ್ರಯ್ಯ ಸ್ವಾಮಿ, ಪ್ರಕಾಶ ತಲಕಾಲುಕೊಪ್ಪ, ಗೀತಾ ಮಲ್ಲಿಕಾರ್ಜುನ, ಬಿ.ಎಚ್.ಕೃಷ್ಣಮೂರ್ತಿ, ಹೊನ್ನಪ್ಪ ಎಣ್ಣೆಕೊಪ್ಪ, ಬಸವನ ಗೌಡ ಮಲ್ಲಾಪುರ, ಕೆರಿಯಪ್ಪ, ಸುಧಾ ಶಿವಪ್ರಸಾದ್ ಕುಸದ್, ರಾಜು ಬಡಗಿ, ವಿಶ್ವನಾಥ, ವಿನಯ್ ಗುತ್ತೇರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನವಟ್ಟಿ:</strong> ಸೊರಬ, ಆನವಟ್ಟಿ, ಶಿರಾಳಕೊಪ್ಪಕ್ಕೆ ಶರಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯು ಕೇಂದ್ರ ಸರ್ಕಾರದ ಶೇ60 ಹಾಗೂ ರಾಜ್ಯ ಸರ್ಕಾರದ ಶೇ 40 ರಷ್ಟು ಅನುದಾನದಲ್ಲಿ ಸಿದ್ಧವಾಗಿದೆ. ಟೆಂಡರ್ ಆಗಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ನೀರು ಪೂರೈಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. </p>.<p>ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ವಿಕಸಿತ ಭಾರತದ ಅಮೃತ ಕಾಲ ಸಂಕಲ್ಪ’ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. </p>.<p>ಮಡಿವಾಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು ಮಾತನಾಡಿ, ‘ಮೋದಿ ಅವರಿಂದ ಭಾರತ ವಿಕಸಿತ ಆದಂತೆ, ಸಂಸದ ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗ ಜಿಲ್ಲೆ ವಿಕಸಿತವಾಗಿದೆ’ ಎಂದರು. </p>.<p>‘ಬಿಜೆಪಿ ಆಡಳಿತದಲ್ಲಿ ನಿರ್ಮಾಣ ಮಾಡಿರುವ ಕೆಎಸ್ಆರ್ಟಿ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಸೊರಬ ತಾಲ್ಲೂಕಿನಿಂದ ಆಯ್ಕೆಯಾಗಿರುವ ಸಚಿವರಿಗೆ ಸಾಧ್ಯವಾಗಿಲ್ಲ. ಗ್ಯಾರಂಟಿಗಳ ಜಪದಲ್ಲಿ ತಾಲ್ಲೂಕಿನ ಹದಗೆಟ್ಟ ರಸ್ತೆಗಳ ಗುಂಡಿ ಮುಚ್ಚಲು ಅವರಿಗೆ ಸಾಧ್ಯವಾಗಿಲ್ಲ’ ಎಂದು ಹೇಳಿದರು. </p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಮುಖಂಡರಾದ ಮೇಘರಾಜ್, ಕೊಟ್ರಯ್ಯ ಸ್ವಾಮಿ, ಪ್ರಕಾಶ ತಲಕಾಲುಕೊಪ್ಪ, ಗೀತಾ ಮಲ್ಲಿಕಾರ್ಜುನ, ಬಿ.ಎಚ್.ಕೃಷ್ಣಮೂರ್ತಿ, ಹೊನ್ನಪ್ಪ ಎಣ್ಣೆಕೊಪ್ಪ, ಬಸವನ ಗೌಡ ಮಲ್ಲಾಪುರ, ಕೆರಿಯಪ್ಪ, ಸುಧಾ ಶಿವಪ್ರಸಾದ್ ಕುಸದ್, ರಾಜು ಬಡಗಿ, ವಿಶ್ವನಾಥ, ವಿನಯ್ ಗುತ್ತೇರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>