<p><strong>ಶಿವಮೊಗ್ಗ:</strong> ತುಮಕೂರು–ಶಿವಮೊಗ್ಗಚತುಷ್ಪಥ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಮಗಾರಿ ನಾಲ್ಕು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೂರು ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಗತಿಯಲ್ಲಿದೆ. 4ನೇ ಹಂತದ ಭದ್ರಾವತಿ-ಶಿವಮೊಗ್ಗ ನಡುವಿನ ಕಾಮಗಾರಿಗೆಇದುವರೆಗೂಚಾಲನೆ ನೀಡಿಲ್ಲ. ಈ ನಡುವೆ ರಸ್ತೆ ಬದಿಯ ಮರಗಳ ಕಟಾವಿಗೂಹಣ ಸಂದಾಯ ಮಾಡಲಾಗಿದೆ. ಅರಣ್ಯ ಇಲಾಖೆಯ ಮರಗಳಿಗೆ ನಿಯಮಾನುಸಾರ ಹಣ ಪಾವತಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿ ನಡೆಸಲು ಎದುರಾಗಿರುವ ಸಮಸ್ಯೆ ಇತ್ಯರ್ಥಪಡಿಸಿಕೊಂಡುತಕ್ಷಣ ಶಿವಮೊಗ್ಗದಿಂದಲೇ ಕೆಲಸ ಆರಂಭಿಸಲುತಾಕೀತು ಮಾಡಿದರು.</p>.<p>ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ವಿಳಂಬ ಮಾಡುವ ಅಧಿಕಾರಿಗಳ ವರ್ತನೆ ಸಹಿಸಸುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇರಸ್ತೆ ಬದಿ ಗಿಡಗಳನ್ನು ನೆಟ್ಟು, 15 ವರ್ಷಗಳವರೆಗೆ ಪೋಷಿಸಬೇಕು ಎಂದುಸೂಚಿಸಿದರು.</p>.<p>ಕಾಮಗಾರಿಗೆ ಅಗತ್ಯವಿರುವ ಕಲ್ಲುಕ್ವಾರಿ, ಮರಳು ಕ್ವಾರಿಗಳನ್ನು ಜಿಲ್ಲಾಧಿಕಾರಿ ಅನುಮತಿ ಪಡೆದು, ಒದಗಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ಕಾಮಗಾರಿಯಲ್ಲಿ ದೊರೆತ ಕಲುಗಳನ್ನು ಈ ಕಾಮಗಾರಿಗೆ ಬಳಸಿಕೊಳ್ಳಲು ಸಹಕರಿಸುವಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆಸೂಚಿಸಿದರು.ಕಾಮಗಾರಿ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಕೆರೆಗಳ ಹೂಳೂಎತ್ತಿಕೊಳ್ಳುವಂತೆಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಕಲ್ಲು, ಮರಳು, ಮಣ್ಣುಪೂರೈಸಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುತ್ತದೆ. ಶಿವಮೊಗ್ಗ ಹೊರವಲಯದ ವರ್ತುಲರಸ್ತೆ ನಿರ್ಮಾಣಮಾಡುವಲ್ಲಿ ಯಾವುದೇ ಅಡತಡೆ ಇಲ್ಲ. ಹಲವು ದಾಖಲೆಗಳನ್ನು ನಿರ್ವಹಿಸುವ ಕಾರ್ಯ ಭರದಿಂದ ಸಾಗಿದೆ. ಈ ತಿಂಗಳ ಅಂತ್ಯಕ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಊರಗಡೂರು ಮತ್ತು ಇಸ್ಲಾಪುರಗಳಲ್ಲಿನ ಸಣ್ಣ-ಪುಟ್ಟ ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ರಾಜ್ಯ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕಶಿರೀಷ್ ಗಂಗಾಧರ್, ಜಿಲ್ಲಾ ಭೂಸ್ವಾಧೀನಾಧಿಕಾರಿ ಗಣಪತಿ ಕಟ್ಟಿನಕೆರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ತುಮಕೂರು–ಶಿವಮೊಗ್ಗಚತುಷ್ಪಥ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಮಗಾರಿ ನಾಲ್ಕು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೂರು ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಗತಿಯಲ್ಲಿದೆ. 4ನೇ ಹಂತದ ಭದ್ರಾವತಿ-ಶಿವಮೊಗ್ಗ ನಡುವಿನ ಕಾಮಗಾರಿಗೆಇದುವರೆಗೂಚಾಲನೆ ನೀಡಿಲ್ಲ. ಈ ನಡುವೆ ರಸ್ತೆ ಬದಿಯ ಮರಗಳ ಕಟಾವಿಗೂಹಣ ಸಂದಾಯ ಮಾಡಲಾಗಿದೆ. ಅರಣ್ಯ ಇಲಾಖೆಯ ಮರಗಳಿಗೆ ನಿಯಮಾನುಸಾರ ಹಣ ಪಾವತಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿ ನಡೆಸಲು ಎದುರಾಗಿರುವ ಸಮಸ್ಯೆ ಇತ್ಯರ್ಥಪಡಿಸಿಕೊಂಡುತಕ್ಷಣ ಶಿವಮೊಗ್ಗದಿಂದಲೇ ಕೆಲಸ ಆರಂಭಿಸಲುತಾಕೀತು ಮಾಡಿದರು.</p>.<p>ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ವಿಳಂಬ ಮಾಡುವ ಅಧಿಕಾರಿಗಳ ವರ್ತನೆ ಸಹಿಸಸುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇರಸ್ತೆ ಬದಿ ಗಿಡಗಳನ್ನು ನೆಟ್ಟು, 15 ವರ್ಷಗಳವರೆಗೆ ಪೋಷಿಸಬೇಕು ಎಂದುಸೂಚಿಸಿದರು.</p>.<p>ಕಾಮಗಾರಿಗೆ ಅಗತ್ಯವಿರುವ ಕಲ್ಲುಕ್ವಾರಿ, ಮರಳು ಕ್ವಾರಿಗಳನ್ನು ಜಿಲ್ಲಾಧಿಕಾರಿ ಅನುಮತಿ ಪಡೆದು, ಒದಗಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ಕಾಮಗಾರಿಯಲ್ಲಿ ದೊರೆತ ಕಲುಗಳನ್ನು ಈ ಕಾಮಗಾರಿಗೆ ಬಳಸಿಕೊಳ್ಳಲು ಸಹಕರಿಸುವಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆಸೂಚಿಸಿದರು.ಕಾಮಗಾರಿ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಕೆರೆಗಳ ಹೂಳೂಎತ್ತಿಕೊಳ್ಳುವಂತೆಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಕಲ್ಲು, ಮರಳು, ಮಣ್ಣುಪೂರೈಸಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುತ್ತದೆ. ಶಿವಮೊಗ್ಗ ಹೊರವಲಯದ ವರ್ತುಲರಸ್ತೆ ನಿರ್ಮಾಣಮಾಡುವಲ್ಲಿ ಯಾವುದೇ ಅಡತಡೆ ಇಲ್ಲ. ಹಲವು ದಾಖಲೆಗಳನ್ನು ನಿರ್ವಹಿಸುವ ಕಾರ್ಯ ಭರದಿಂದ ಸಾಗಿದೆ. ಈ ತಿಂಗಳ ಅಂತ್ಯಕ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಊರಗಡೂರು ಮತ್ತು ಇಸ್ಲಾಪುರಗಳಲ್ಲಿನ ಸಣ್ಣ-ಪುಟ್ಟ ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ರಾಜ್ಯ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕಶಿರೀಷ್ ಗಂಗಾಧರ್, ಜಿಲ್ಲಾ ಭೂಸ್ವಾಧೀನಾಧಿಕಾರಿ ಗಣಪತಿ ಕಟ್ಟಿನಕೆರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>