ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಬೆಂಲಿಸಿದರೆ ತಾಲಿಬಾನ್ ಅಧಿಕಾರಕ್ಕೆ: ಪ್ರತಾಪ್‌ ಸಿಂಹ

Last Updated 26 ಫೆಬ್ರುವರಿ 2022, 18:11 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದರೆ ತಾಲಿಬಾನ್ ಸರ್ಕಾರ ಅಧಿಕಾರ ಪಡೆದಂತೆ. ಈ ಕುರಿತು ಜನರು ಜಾಗೃತರಾಗಬೇಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದರು.

ಮೃತ ಹರ್ಷ ಮನೆಗೆ ಭೇಟಿ ನೀಡಿ, ₹5 ಲಕ್ಷ ಆರ್ಥಿಕ ನೆರವು ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

‘ಹಿಂದೂ ಯುವಕ ಹರ್ಷ ಹತ್ಯೆಯಾಗಿ ಒಂದು ವಾರ ಕಳೆಯುತ್ತಾ ಬಂದರೂ ಕಾಂಗ್ರೆಸ್ ನಾಯಕರಿಗೆ ಆತನ ಕುಟುಂಬಕ್ಕೆ ಸಾಂತ್ವನ ಹೇಳಲು ಸಮಯ ಇಲ್ಲವಾಗಿದೆ. ರಾಜಕೀಯಕ್ಕಾಗಿ ಒಂದು ವರ್ಗವನ್ನು ಓಲೈಸುವ ಕಾಂಗ್ರೆಸ್ ನಡವಳಿಕೆ ಖಂಡನೀಯ. ಎಲ್ಲವನ್ನೂ ಹಿಂದೂ ಸಮಾಜ ಗಮನಿಸುತ್ತಿದೆ. ಕೋಮುವಾದಕ್ಕೆ ಬಲಿಯಾದ ಹಿಂದೂ ಯುವಕರ ರಕ್ಷಣೆಗೆ ಬೆಂಗಾವಲಾಗಿ ನಿಲ್ಲುತ್ತೇವೆ’ ಎಂದು ಭರವಸೆ ನೀಡಿದರು.

‘ಹರ್ಷ ಸೇರಿ ರಾಜ್ಯದಲ್ಲಿ ನಡೆದ ಹಿಂದೂ ಯುವಕರ ಹತ್ಯೆ ಧರ್ಮಾಂಧತೆಯ ಹತ್ಯೆ. ಹಂತಕರ ವಿರುದ್ಧ ಸರ್ಕಾರ ಕೋಕಾ ಕಾಯ್ದೆ ಪ್ರಯೋಗಿಸಬೇಕು. ಹಂತಕರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಬಿಗಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT