ಶಾಸಕ ಬಿ.ಕೆ. ಸಂಗಮೇಶ್ವರ ಮಾತನಾಡಿ, ‘ವಿದ್ಯೆಯ ಮೂಲಕ ಬದುಕು ಕಟ್ಟಿಕೊಳ್ಳುವ ಶಿಕ್ಷಣವನ್ನು ನೀಡಿದ ಶಿವಕುಮಾರ ಸ್ವಾಮೀಜಿ ಅವರ ಚಿಂತನೆ ಎಲ್ಲರಿಗೂ ಮಾದರಿ. ಧರ್ಮದ ಸಾರವನ್ನು ಬದುಕಿನಲ್ಲಿ ಕಟ್ಟಿಕೊಡುವ ಕೆಲಸ ಮಾಡಿದ ಅವರು ಕೆಲಸ ಮಾನವ ಕುಲಕ್ಕೆ ಶಾಂತಿ ತುಂಬುವಂತೆ ಮಾಡಿದೆ’ ಎಂದರು. ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ನಗರಸಭಾ ಸದಸ್ಯ ಬಿ.ಕೆ. ಮೋಹನ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಕೆ.ಎಚ್. ತೀರ್ಥಯ್ಯ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂದಿನಿ ಮಲ್ಲಿಕಾರ್ಜುನ್ ತಂಡದಿಂದ ಪ್ರಾರ್ಥನೆ ನಡೆಯಿತು. ಕೆ.ಎಚ್. ತೀರ್ಥಯ್ಯ ಸ್ವಾಗತಿಸಿದರು. ಅಡವೀಶಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಿ.ಜಿ. ಧನಂಜಯ ನಿರೂಪಿಸಿದರು. ಬಿ.ಎಸ್. ಮಹೇಶಕುಮಾರ್, ಪರಮೇಶ್ವರ್ ಪರಿಚಯ ಮಾಡಿಕೊಟ್ಟರು.