ಸದ್ಯ ಲಾಂಚ್ ಸ್ಥಗಿತದಿಂದ ಈ ಭಾಗದ ತುಮರಿ, ಮಾರಲಗೋಡು, ಬ್ಯಾಕೋಡು ಭಾಗದ ತುರ್ತು ಆರೋಗ್ಯ ಸೇವೆ ಸೇರಿ ಜೋಗ– ಕಾರ್ಗಲ್ ತೆರಳಲು ತೊಂದರೆಯಾಗುತ್ತದೆ. ಅಲ್ಲದೇ ಹೊಳೆಬಾಗಿಲು ಲಾಂಚ್ನಲ್ಲಿ ಪ್ರತಿನಿತ್ಯ ಜನದಟ್ಟಣೆ ಇರುವ ಕಾರಣ ಬಹುತೇಕ ಸಿಗಂದೂರು ಪ್ರವಾಸಿಗರು ಈ ಸುಗಮ ಮಾರ್ಗದ ಮೊರೆ ಹೋಗಿದ್ದರು. ಸದ್ಯ ಇದು ಕೂಡ ಸ್ಥಗಿತಗೊಂಡಿದ್ದು, ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.