<p><strong>ಭದ್ರಾವತಿ:</strong> ಕ್ರಿಕೆಟ್ ಆಟದ ವೇಳೆ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೋಮವಾರ ರಾತ್ರಿ ನಗರದ ಹೊಸಮನೆ ಶಿವಾಜಿ ವೃತ್ತದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಅರುಣ್ (23) ಕೊಲೆಯಾದ ಯುವಕ. ಸೋಮವಾರ ಬೆಳಿಗ್ಗೆ ಅಕ್ಕಮಹಾದೇವಿ ವಿದ್ಯಾ ಸಂಸ್ಥೆ (ಎ.ವಿ.ಎಸ್.) ಬಳಿ ಇರುವ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. </p>.<p>ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರಿದಿದ್ದು, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಯುವಕನ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.</p>.<p>ನಗರದ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪನಿರೀಕ್ಷಕ ಕೃಷ್ಣಕುಮಾರ್, ನಗರ ಪೊಲೀಸ್ ಠಾಣೆ ಉಪನಿರೀಕ್ಷಕ ಚಂದ್ರಶೇಖರ್ ನಾಯಕ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<p>ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಕ್ರಿಕೆಟ್ ಆಟದ ವೇಳೆ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೋಮವಾರ ರಾತ್ರಿ ನಗರದ ಹೊಸಮನೆ ಶಿವಾಜಿ ವೃತ್ತದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಅರುಣ್ (23) ಕೊಲೆಯಾದ ಯುವಕ. ಸೋಮವಾರ ಬೆಳಿಗ್ಗೆ ಅಕ್ಕಮಹಾದೇವಿ ವಿದ್ಯಾ ಸಂಸ್ಥೆ (ಎ.ವಿ.ಎಸ್.) ಬಳಿ ಇರುವ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. </p>.<p>ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರಿದಿದ್ದು, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಯುವಕನ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.</p>.<p>ನಗರದ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪನಿರೀಕ್ಷಕ ಕೃಷ್ಣಕುಮಾರ್, ನಗರ ಪೊಲೀಸ್ ಠಾಣೆ ಉಪನಿರೀಕ್ಷಕ ಚಂದ್ರಶೇಖರ್ ನಾಯಕ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<p>ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>