ಶಿವಮೊಗ್ಗ: ಚಿತ್ರದುರ್ಗದಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಶಿವಮೂರ್ತಿ ಮುರುಘಾ ಶರಣರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ ಅನ್ನು ಶಿವಮೊಗ್ಗ ಜೈಲಿಗೆ ಶುಕ್ರವಾರ ಕರೆತರಲಾಗಿದೆ.
ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ವಾರ್ಡನ್ ಮೇಲಿದೆ. ಅವರನ್ನು ಡಿವೈಎಸ್ಪಿ ಅನಿಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಗುರುವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು.
ವೈದ್ಯಕೀಯ ತಪಾಸಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ವಾರ್ಡನ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಚಿತ್ರದುರ್ಗದಲ್ಲಿ ಮಹಿಳಾ ಬಂಧೀಕಾನೆ ಇಲ್ಲದಿರುವ ಕಾರಣ ಶಿವಮೊಗ್ಗದ ಜೈಲಿಗೆ ಕರೆತರಲಾಗಿದೆ.