ವೈದ್ಯರ ತಂಡ ರಚನೆ: ‘ಮುರುಘಾ ಶರಣರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಯ ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗಿದೆ. ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ಪರಮೇಶ್ವರಪ್ಪ ತಂಡದ ನೇತೃತ್ವ ವಹಿಸಿದ್ದಾರೆ' ಎಂದು ಶಿವಮೊಗ್ಗ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಮುಖ್ಯಸ್ಥ ಡಾ.ವಿ.ವಿರೂಪಾಕ್ಷಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.