‘ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿರುವುದರಿಂದ ಇವುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಈಗಾಗಲೇ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಬಿಜೆಪಿಯವರು ಕಾಯ್ದೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಯಾವ ದೃಷ್ಟಿಕೋನದಲ್ಲಿ ಈ ಕಾಯ್ದೆಗಳು ರೈತರಿಗೆ ಪೂರಕ ಎಂಬುದನ್ನು ದಾಖಲೆಗಳ ಸಮೇತ ಮನದಟ್ಟು ಮಾಡಿದರೆ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಹಿಂಪಡೆಯಲಾಗುವುದು’ ಎಂದರು.