‘ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರು ಶಿಕಾರಿಪುರದ ಬಳ್ಳಿಗಾವೆಯವರು. 12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅವರ ಹೆಸರನ್ನು ಶಿವಮೊಗ್ಗದ ಸ್ವಾತಂತ್ರ್ಯ ಉದ್ಯಾನಕ್ಕೆ ಇಡಬೇಕೆಂಬುದು ಜನರ ಒತ್ತಾಸೆ ಆಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು, ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿರುವುದಕ್ಕೆ ನಿದರ್ಶನ’ ಎಂದು ಅವರು ಬಣ್ಣಿಸಿದ್ದಾರೆ.