ಸಾಗರ: ನಾರಾಯಣಗುರುಗಳ ಸಮ ಸಮಾಜದ ಕನಸು ಕಾಣುವ ಜೊತೆಗೆ ಅದನ್ನು ಸಾಕಾರಗೊಳಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟ ದಾರ್ಶನಿಕ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಮೂಲಕ ಸಮಾಜದಲ್ಲಿ ಹಿಂದುಳಿದವರು ಮುಖ್ಯವಾಹಿನಿಗೆ ಬರಬೇಕು ಎಂದು ನಾರಾಯಣಗುರುಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಂಡ ಕಾರಣ ಕೇರಳದಲ್ಲಿ ಸಾಕ್ಷರತೆ ಪ್ರಮಾಣ ಶೇ 100 ತಲುಪಿದೆ ಎಂದರು.
ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಎಂ.ಹಾಲಪ್ಪ ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಆರ್ಯ ಈಡಿಗರ ಸಂಘದ ಎಂ.ಸಿ. ಪರಶುರಾಮಪ್ಪ, ಬಿ.ನಾಗರಾಜ್, ಸರ್ವಮಂಗಳಾ ನಾಗರಾಜ್, ದೇವೇಂದ್ರಪ್ಪ ಯಲಕುಂದ್ಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಪರಮೇಶ್ವರಪ್ಪ ಇದ್ದರು.