ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ| ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ನರೇಂದ್ರ ಮೋದಿ ಕೊಡುಗೆ: ಪ್ರಲ್ಹಾದ ಜೋಶಿ

ನೂತನ ವಿಮಾನ ನಿಲ್ದಾಣದ ಉದ್ಘಾಟನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ
Last Updated 27 ಫೆಬ್ರುವರಿ 2023, 5:30 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಸೋಗಾನೆಯ ನೂತನ ವಿಮಾನ ನಿಲ್ದಾಣ ಉದ್ಘಾಟನೆಯ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಜನ್ಮದಿನದ ಕೊಡುಗೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ವಿಮಾನ ನಿಲ್ದಾಣವನ್ನು ಯಡಿಯೂರಪ್ಪ ಅವರು ಶಿವಮೊಗ್ಗದ ಜನತೆಗೆ ಕೊಡುಗೆ ಕೊಟ್ಟಿದ್ದಾರೆ. ಹೀಗಾಗಿ ಅವರ ಹುಟ್ಟುಹಬ್ಬದ ದಿನವೇ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನ ನಿಗದಿಗೊಳಿಸಲಾಗಿದೆ. ಇದು ಯೋಚನೆ ಮಾಡಿ ಕೈಗೊಂಡ ನಿರ್ಧಾರ ಎಂಬುದು ನನ್ನ ಭಾವನೆ’ ಎಂದರು.

‘ಚುನಾವಣಾ ರಾಜಕಾರಣ ದಿಂದ ನಿವೃತ್ತರಾದ ಯಡಿಯೂರಪ್ಪ ಅವರನ್ನು ಮುಂದೆ ಪಕ್ಷ ಹೇಗೆ ಬಳಕೆ ಮಾಡಿಕೊಳ್ಳ ಲಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ‘ಬಿಜೆಪಿ ಎಲ್ಲ ಹಂತದಲ್ಲಿ ಯಡಿಯೂರಪ್ಪ ಅವರ ಅನುಭವ, ನಾಯಕತ್ವವನ್ನು ಬಳಕೆ ಮಾಡಿಕೊಳ್ಳಲಿದೆ. ಪಕ್ಷ ಬಯಸಿದಾಗಲೆಲ್ಲ ನಾನು ಲಭ್ಯವಿರುತ್ತೇನೆ ಎಂದು ಸ್ವತಃ ಅವರೇ ಹೇಳಿದ್ದಾರೆ. ಹೀಗಾಗಿ ಸಂಪೂರ್ಣವಾಗಿ ಅವರ ನಾಯಕತ್ವವನ್ನು ಬಳಕೆ ಮಾಡಿ ಕೊಳ್ಳಲಾಗುವುದು’ ಎಂದರಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT