<p><strong>ಸಾಗರ</strong>: ‘ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರನ್ನು ಕೈ ಬಿಡಬೇಕು’ ಎಂದು ಒತ್ತಾಯಿಸಿ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಗರ್ಭಿಣಿ ಶಿಕ್ಷಕಿಯರನ್ನು, ಚಿಕ್ಕ ಮಕ್ಕಳನ್ನು ಹೊಂದಿರುವ ಶಿಕ್ಷಕಿಯರನ್ನು, ಅಂಗವಿಕಲ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಬಾರದು. ಬ್ಲಾಕ್ ವಿಂಗಡಣೆ ಮಾಡುವಾಗ ಆಯಾ ಕ್ಲಸ್ಟರ್ನ ಸಿಆರ್ಪಿ, ಇಸಿಒಗಳ ನೆರವಿನೊಂದಿಗೆ ಗಣತಿದಾರರಿಗೆ ಬ್ಲಾಕ್ ಹಂಚಿಕೆ ಮಾಡಬೇಕು’ ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಗಣತಿ ಕಾರ್ಯಕ್ಕೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರೌಢಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ನಿಯೋಜನೆ ಸಂದರ್ಭದಲ್ಲಿ ಶಿಕ್ಷಕರ ಬೇಡಿಕೆಗಳಿಗೆ ತಾಲ್ಲೂಕು ಆಡಳಿತ ಸ್ಪಂದಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಾಲತೇಶ್, ದಿನೇಶ್, ಶಾರದಾ, ರಾಜಶೇಖರ ಶೆಟ್ಟಿ, ಎಂ.ಪಿ.ಸತ್ಯನಾರಾಯಣ, ವಿಕ್ಟೊರಿಯಾ ಫರ್ನಾಂಡಿಸ್, ಅಲ್ಲಾಭಕ್ಷಿ, ಗವಿಯಪ್ಪ ಎಲ್.ಟಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರನ್ನು ಕೈ ಬಿಡಬೇಕು’ ಎಂದು ಒತ್ತಾಯಿಸಿ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಗರ್ಭಿಣಿ ಶಿಕ್ಷಕಿಯರನ್ನು, ಚಿಕ್ಕ ಮಕ್ಕಳನ್ನು ಹೊಂದಿರುವ ಶಿಕ್ಷಕಿಯರನ್ನು, ಅಂಗವಿಕಲ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಬಾರದು. ಬ್ಲಾಕ್ ವಿಂಗಡಣೆ ಮಾಡುವಾಗ ಆಯಾ ಕ್ಲಸ್ಟರ್ನ ಸಿಆರ್ಪಿ, ಇಸಿಒಗಳ ನೆರವಿನೊಂದಿಗೆ ಗಣತಿದಾರರಿಗೆ ಬ್ಲಾಕ್ ಹಂಚಿಕೆ ಮಾಡಬೇಕು’ ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಗಣತಿ ಕಾರ್ಯಕ್ಕೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರೌಢಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ನಿಯೋಜನೆ ಸಂದರ್ಭದಲ್ಲಿ ಶಿಕ್ಷಕರ ಬೇಡಿಕೆಗಳಿಗೆ ತಾಲ್ಲೂಕು ಆಡಳಿತ ಸ್ಪಂದಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಾಲತೇಶ್, ದಿನೇಶ್, ಶಾರದಾ, ರಾಜಶೇಖರ ಶೆಟ್ಟಿ, ಎಂ.ಪಿ.ಸತ್ಯನಾರಾಯಣ, ವಿಕ್ಟೊರಿಯಾ ಫರ್ನಾಂಡಿಸ್, ಅಲ್ಲಾಭಕ್ಷಿ, ಗವಿಯಪ್ಪ ಎಲ್.ಟಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>