‘ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿಯೂ ಹೆಚ್ಚುತ್ತಿದೆ. ಅರಣ್ಯ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನದ್ದು. ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತವಾಗಿದೆ. ಮುಂದಿನ ಜನಾಂಗದ ಉತ್ತಮ ಭವಿಷ್ಯಕ್ಕೆಅರಣ್ಯ ಸಂರಕ್ಷಣೆ ಅಗತ್ಯವಾಗಿದೆ’ ಎಂದರು.