<p><strong>ಶಿವಮೊಗ್ಗ:</strong> ಪ್ರಜಾಪ್ರಭುತ್ವ ಸದೃಢಗೊಳಿಸಲು ಪ್ರತಿಯೊಬ್ಬರೂ ಚುನಾವಣೆಗಳಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಓಂಕಾರಪ್ಪ ಸಲಹೆ ನೀಡಿದರು.</p>.<p>ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯಶಾಸ್ತ್ರ ವಿಭಾಗ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ<br />ಅವರು ಮಾತನಾಡಿದರು.</p>.<p>ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸರ್ಕಾರ ಅಸ್ತಿತ್ವಕ್ಕೆ ಬರಲು ಚುನಾವಣೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ.18 ವರ್ಷ ತುಂಬಿದ ದೇಶದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಕೇವಲ ತಾವಷ್ಟೇ ಮತ ಚಲಾಯಿಸಿದರೆ ಸಾಲದು. ತಮ್ಮ ಕುಟುಂಬ, ನೆರೆ-ಹೊರೆಯವರಿಗೂ ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದರು.</p>.<p>ಚುನಾವಣೆ ಪವಿತ್ರ ಕಾರ್ಯ. ಯಾವುದೇ ಒಳ್ಳೆಯ ಸರ್ಕಾರ ಅಥವಾ ಕೆಟ್ಟ ಸರ್ಕಾರದ ಅಸ್ತಿತ್ವ ಮತದಾರರ ಮೇಲೆ ಅವಲಂಬಿತವಾಗಿರುತ್ತದೆ.ದೇಶದ ಪ್ರಜೆಗಳೆಲ್ಲ ಸಕ್ರಿಯವಾಗಿ ಪಾಲ್ಗೊಂಡು ಅರ್ಹರಿಗೆ ಮತ ಚಲಾಯಿಸುವುದರ ಮೂಲಕ ಉತ್ತಮ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಚ್.ಎಸ್.ನಾಗಭೂಷಣ, ‘ಅರ್ಹ ಮತದಾರರು ಪ್ರತಿ ಚುನಾವಣೆಯಲ್ಲಿ ಭಾಗವಹಿಸಬೇಕು. ಕಡ್ಡಾಯವಾಗಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದ ಉದ್ದೇಶಗಳು ಈಡೇರುವಂತೆ ಮಾಡಬೇಕು’ ಎಂದರು.</p>.<p>ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ,ಉಪನ್ಯಾಸಕರಾದ ವಿದ್ಯಾಶ್ರೀ ಬಿ.ಕೆ., ಎನ್.ಡಿ.ರಮೇಶ, ಈಶ್ವರ, ನಾಗಾರ್ಜುನ ಉಪಸ್ಥಿತರಿದ್ದರು.ರಮ್ಯಶ್ರೀ ಪ್ರತಿಜ್ಞಾವಿಧಿ ಭೋದಿಸಿದರು.</p>.<p><strong>ಮತದಾನದ ಹಕ್ಕಿನ ಅರಿವು ಅಗತ್ಯ: </strong>‘ನಮ್ಮನ್ನು ಆಳುವ ಸಮರ್ಥ ನಾಯಕರನ್ನು ನಾವೇ ಆರಿಸುವ ಮತದಾನದ ಹಕ್ಕು ಅತ್ಯಂತ ಮಹತ್ವವುಳ್ಳದ್ದಾಗಿದೆ. ಈ ಕುರಿತು ಹೆಚ್ಚಿನ ಅರಿವು ಮೂಡಬೇಕಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ನಗರಪಾಲಿಕೆ ಸಹಯೋಗದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘1950ರಲ್ಲಿ ಸ್ಥಾಪನೆಯಾದ ಚುನಾವಣಾ ಆಯೋಗ ಇಲ್ಲಿಯವರೆಗೂ ಎಲ್ಲ ಚುನಾವಣೆಗಳನ್ನು ನಡೆಸುತ್ತಾ ಬಂದಿದೆ. ಚುನಾವಣೆಗಳಲ್ಲಿ ಶೇ 40, ಶೇ 50ರಷ್ಟು ಕಡಿಮೆ ಮತದಾನ ಆಗುತ್ತಿರುವುದು ಒಂದು ಗಂಭೀರವಾದ ವಿಚಾರ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಎಡಿಸಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ, ಚುನಾವಣಾ ಶಾಖೆಯ ತಹಶೀಲ್ದಾರ್ ಮಂಜುಳಾಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪ್ರಜಾಪ್ರಭುತ್ವ ಸದೃಢಗೊಳಿಸಲು ಪ್ರತಿಯೊಬ್ಬರೂ ಚುನಾವಣೆಗಳಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಓಂಕಾರಪ್ಪ ಸಲಹೆ ನೀಡಿದರು.</p>.<p>ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯಶಾಸ್ತ್ರ ವಿಭಾಗ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ<br />ಅವರು ಮಾತನಾಡಿದರು.</p>.<p>ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸರ್ಕಾರ ಅಸ್ತಿತ್ವಕ್ಕೆ ಬರಲು ಚುನಾವಣೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ.18 ವರ್ಷ ತುಂಬಿದ ದೇಶದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಕೇವಲ ತಾವಷ್ಟೇ ಮತ ಚಲಾಯಿಸಿದರೆ ಸಾಲದು. ತಮ್ಮ ಕುಟುಂಬ, ನೆರೆ-ಹೊರೆಯವರಿಗೂ ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದರು.</p>.<p>ಚುನಾವಣೆ ಪವಿತ್ರ ಕಾರ್ಯ. ಯಾವುದೇ ಒಳ್ಳೆಯ ಸರ್ಕಾರ ಅಥವಾ ಕೆಟ್ಟ ಸರ್ಕಾರದ ಅಸ್ತಿತ್ವ ಮತದಾರರ ಮೇಲೆ ಅವಲಂಬಿತವಾಗಿರುತ್ತದೆ.ದೇಶದ ಪ್ರಜೆಗಳೆಲ್ಲ ಸಕ್ರಿಯವಾಗಿ ಪಾಲ್ಗೊಂಡು ಅರ್ಹರಿಗೆ ಮತ ಚಲಾಯಿಸುವುದರ ಮೂಲಕ ಉತ್ತಮ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಚ್.ಎಸ್.ನಾಗಭೂಷಣ, ‘ಅರ್ಹ ಮತದಾರರು ಪ್ರತಿ ಚುನಾವಣೆಯಲ್ಲಿ ಭಾಗವಹಿಸಬೇಕು. ಕಡ್ಡಾಯವಾಗಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದ ಉದ್ದೇಶಗಳು ಈಡೇರುವಂತೆ ಮಾಡಬೇಕು’ ಎಂದರು.</p>.<p>ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ,ಉಪನ್ಯಾಸಕರಾದ ವಿದ್ಯಾಶ್ರೀ ಬಿ.ಕೆ., ಎನ್.ಡಿ.ರಮೇಶ, ಈಶ್ವರ, ನಾಗಾರ್ಜುನ ಉಪಸ್ಥಿತರಿದ್ದರು.ರಮ್ಯಶ್ರೀ ಪ್ರತಿಜ್ಞಾವಿಧಿ ಭೋದಿಸಿದರು.</p>.<p><strong>ಮತದಾನದ ಹಕ್ಕಿನ ಅರಿವು ಅಗತ್ಯ: </strong>‘ನಮ್ಮನ್ನು ಆಳುವ ಸಮರ್ಥ ನಾಯಕರನ್ನು ನಾವೇ ಆರಿಸುವ ಮತದಾನದ ಹಕ್ಕು ಅತ್ಯಂತ ಮಹತ್ವವುಳ್ಳದ್ದಾಗಿದೆ. ಈ ಕುರಿತು ಹೆಚ್ಚಿನ ಅರಿವು ಮೂಡಬೇಕಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ನಗರಪಾಲಿಕೆ ಸಹಯೋಗದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘1950ರಲ್ಲಿ ಸ್ಥಾಪನೆಯಾದ ಚುನಾವಣಾ ಆಯೋಗ ಇಲ್ಲಿಯವರೆಗೂ ಎಲ್ಲ ಚುನಾವಣೆಗಳನ್ನು ನಡೆಸುತ್ತಾ ಬಂದಿದೆ. ಚುನಾವಣೆಗಳಲ್ಲಿ ಶೇ 40, ಶೇ 50ರಷ್ಟು ಕಡಿಮೆ ಮತದಾನ ಆಗುತ್ತಿರುವುದು ಒಂದು ಗಂಭೀರವಾದ ವಿಚಾರ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಎಡಿಸಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ, ಚುನಾವಣಾ ಶಾಖೆಯ ತಹಶೀಲ್ದಾರ್ ಮಂಜುಳಾಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>