ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು

Published 31 ಜನವರಿ 2024, 7:03 IST
Last Updated 31 ಜನವರಿ 2024, 7:03 IST
ಅಕ್ಷರ ಗಾತ್ರ

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಬಿಗಿ ಭದ್ರತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೀರ್ಥಹಳ್ಳಿ ಪೊಲೀಸರು ಕರೆತಂದರು.

ತೀರ್ಥಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ನೇತೃತ್ವದಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಯಿತು.

ಮಾವೋವಾದಿ ನಕ್ಸಲ್ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾಕೇತ್ ರಾಜನ್ ಸಾವಿನ ಬಳಿಕ ರಾಜ್ಯದಲ್ಲಿ ನಕ್ಸಲ್ ಹೋರಾಟವನ್ನು ಮುನ್ನಡೆಸಿದ್ದರು ಎಂದು ತಿಳಿದುಬಂದಿದೆ.

ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಹಾಗೂ ಆಗುಂಬೆ ಠಾಣೆಯ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ ಆರೋಪಿಯಾಗಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ನಿವಾಸಿ ಬಿ.ಜಿ.ಕೃಷ್ಣಮೂರ್ತಿ

2021ರ ನವೆಂಬರ್‌ನಲ್ಲಿ ಕೇರಳ ಪೊಲೀಸರಿಂದ ಬಂಧಿತರಾಗಿದ್ದರು.

ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಾಡಿ ವಾರೆಂಟ್ ಮೇಲೆ ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT