<p><strong>ಹೊಸನಗರ:</strong> ತಾಲ್ಲೂಕಿನ ಬಿದನೂರು ಬಳಿಯ ಕಲಾವತಿ ಮತ್ತು ಇಳಾವತಿ ಹೊಳೆಗಳ ಸಂಗಮ ಕ್ಷೇತ್ರವಾದ ಕಗ್ಗೋಡಿ ಬ್ಯಾಣದಲ್ಲಿ ಇತಿಹಾಸ ಸಂಶೋಧಕ ಅಜಯಕುಮಾರ ಶರ್ಮಾ ಅವರು ನವಶಿಲಾಯುಗದ ಕಲ್ಲು ಉಂಗುರವನ್ನು ಪತ್ತೆ ಹಚ್ಚಿದ್ದಾರೆ. </p>.<p>‘ಉಂಗುರಗಲ್ಲು ದೊರೆತ ಸ್ಥಳವು ಬಿದನೂರು ನಗರದಿಂದ 4 ಕಿ.ಮೀ. ದೂರದಲ್ಲಿದೆ. ಈ ಭಾಗದಲ್ಲಿ 6 ಸಾವಿರ ವರ್ಷಗಳಷ್ಟು ಹಳೆಯದಾದ ಈ ಕಲ್ಲಿನ ಉಂಗುರ ಪತ್ತೆಯಾಗಿದೆ. ಕಗ್ಗೋಡಿ ಬ್ಯಾಣ ಪ್ರದೇಶದಲ್ಲಿ ನವಶಿಲಾಯುಗದ ಜನವಸತಿ ಇತ್ತು ಎನ್ನಲು ಇದು ಜೀವಂತ ಸಾಕ್ಷಿಯಾಗಿದೆ’ ಎಂದು ಅವರು ತಿಳಿಸಿದ್ದಾರೆ. </p>.<p>‘ಕಗ್ಗೋಡಿ ಊರಿನ ಪದದ ಅರ್ಥ ದೊಡ್ಡ ಗೋಡೆ ಎಂದಾಗಿದೆ. ಇದು ಕೆಳದಿ ಅರಸರ ರಾಜಧಾನಿ ಬಿದನೂರು ನಗರದ ಪ್ರಮುಖ ಸುರಕ್ಷತಾ ಕವಚ ಆಗಿತ್ತು. ಕಬ್ಬಿಣದ ಆವಿಷ್ಕಾರಕ್ಕೂ ಮೊದಲು ತಯಾರಿಸಲಾದ ಈ ಕಲ್ಲಿನ ಉಂಗುರವನ್ನು ಬಲೆಗಳನ್ನು ನೀರಿನಲ್ಲಿ ಮುಳುಗಿಸಲು ತೂಕವಾಗಿ ಮತ್ತು ಮಣಿಗಳಿಗೆ ಹೊಳಪು ಕೊಡಲು ಆಧಾರವಾಗಿ ಬಳಸಲಾಗುತ್ತಿತ್ತು’ ಎಂದು ಅವರು ತಿಳಿಸಿದ್ದಾರೆ. </p>.<p>ತಾಲ್ಲೂಕಿನ ನಿಲ್ಸಕಲ್, ಬೈಸೆ, ಮುಂಬಾರು, ಮೇಲುಸುಂಕ ಮತ್ತು ದಿಬ್ಬಣಗಲ್ಲು ಪ್ರದೇಶಗಳು ಆದಿಮಾನವನ ನೆಲೆಗಳಾಗಿರುವ ಬಗ್ಗೆ ಈಗಾಗಲೇ ಸಾಕಷ್ಟು ಸಂಶೋಧನೆ ನಡೆದಿವೆ. </p>.<p>ಪತ್ತೆ ಕಾರ್ಯದಲ್ಲಿ ಸ್ಥಳೀಯರಾದ ರಾಜಶ್ರೀ ರಾವ್, ಗೋಪಾಲ್ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನ ಬಿದನೂರು ಬಳಿಯ ಕಲಾವತಿ ಮತ್ತು ಇಳಾವತಿ ಹೊಳೆಗಳ ಸಂಗಮ ಕ್ಷೇತ್ರವಾದ ಕಗ್ಗೋಡಿ ಬ್ಯಾಣದಲ್ಲಿ ಇತಿಹಾಸ ಸಂಶೋಧಕ ಅಜಯಕುಮಾರ ಶರ್ಮಾ ಅವರು ನವಶಿಲಾಯುಗದ ಕಲ್ಲು ಉಂಗುರವನ್ನು ಪತ್ತೆ ಹಚ್ಚಿದ್ದಾರೆ. </p>.<p>‘ಉಂಗುರಗಲ್ಲು ದೊರೆತ ಸ್ಥಳವು ಬಿದನೂರು ನಗರದಿಂದ 4 ಕಿ.ಮೀ. ದೂರದಲ್ಲಿದೆ. ಈ ಭಾಗದಲ್ಲಿ 6 ಸಾವಿರ ವರ್ಷಗಳಷ್ಟು ಹಳೆಯದಾದ ಈ ಕಲ್ಲಿನ ಉಂಗುರ ಪತ್ತೆಯಾಗಿದೆ. ಕಗ್ಗೋಡಿ ಬ್ಯಾಣ ಪ್ರದೇಶದಲ್ಲಿ ನವಶಿಲಾಯುಗದ ಜನವಸತಿ ಇತ್ತು ಎನ್ನಲು ಇದು ಜೀವಂತ ಸಾಕ್ಷಿಯಾಗಿದೆ’ ಎಂದು ಅವರು ತಿಳಿಸಿದ್ದಾರೆ. </p>.<p>‘ಕಗ್ಗೋಡಿ ಊರಿನ ಪದದ ಅರ್ಥ ದೊಡ್ಡ ಗೋಡೆ ಎಂದಾಗಿದೆ. ಇದು ಕೆಳದಿ ಅರಸರ ರಾಜಧಾನಿ ಬಿದನೂರು ನಗರದ ಪ್ರಮುಖ ಸುರಕ್ಷತಾ ಕವಚ ಆಗಿತ್ತು. ಕಬ್ಬಿಣದ ಆವಿಷ್ಕಾರಕ್ಕೂ ಮೊದಲು ತಯಾರಿಸಲಾದ ಈ ಕಲ್ಲಿನ ಉಂಗುರವನ್ನು ಬಲೆಗಳನ್ನು ನೀರಿನಲ್ಲಿ ಮುಳುಗಿಸಲು ತೂಕವಾಗಿ ಮತ್ತು ಮಣಿಗಳಿಗೆ ಹೊಳಪು ಕೊಡಲು ಆಧಾರವಾಗಿ ಬಳಸಲಾಗುತ್ತಿತ್ತು’ ಎಂದು ಅವರು ತಿಳಿಸಿದ್ದಾರೆ. </p>.<p>ತಾಲ್ಲೂಕಿನ ನಿಲ್ಸಕಲ್, ಬೈಸೆ, ಮುಂಬಾರು, ಮೇಲುಸುಂಕ ಮತ್ತು ದಿಬ್ಬಣಗಲ್ಲು ಪ್ರದೇಶಗಳು ಆದಿಮಾನವನ ನೆಲೆಗಳಾಗಿರುವ ಬಗ್ಗೆ ಈಗಾಗಲೇ ಸಾಕಷ್ಟು ಸಂಶೋಧನೆ ನಡೆದಿವೆ. </p>.<p>ಪತ್ತೆ ಕಾರ್ಯದಲ್ಲಿ ಸ್ಥಳೀಯರಾದ ರಾಜಶ್ರೀ ರಾವ್, ಗೋಪಾಲ್ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>