<p><strong>ಶಿವಮೊಗ್ಗ: ‘</strong>ಎಲ್ಲ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದೆ. ಹೊಸತನ ಹಾಗೂ ಕಲಿಯುವ ಸೌಜನ್ಯವನ್ನು ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ’ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.</p>.<p>ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎಸ್.ಆರ್.ಎನ್.ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿಗಾಗಿ ಮಂಗಳವಾರ ಏರ್ಪಡಿಸಿದ್ದ ‘ಆಡಳಿತ ನಿರ್ವಹಣೆ - ಕೌಶಲ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಏಕರೂಪವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಿಜವಾದ ಉನ್ನತಿಯಾಗುತ್ತದೆ. ಲೆಕ್ಕಾಚಾರವಿಲ್ಲದ ಬದುಕು ನಿರರ್ಥಕ ಎಂದು ಹೇಳಿದರು.</p>.<p>‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ವಿದ್ಯಾಸಂಸ್ಥೆಯ ಎಲ್ಲ ಸಿಬ್ಬಂದಿ ಜವಾಬ್ದಾರರು. ಅಲ್ಲಿ ಅನುದಾನಿತ ಮತ್ತು ಅನುದಾನರಹಿತ ಎಂಬ ವ್ಯತ್ಯಾಸವಿಲ್ಲ. ಸರ್ಕಾರ ರೂಪಿಸಿರುವ ಶಿಕ್ಷಣ ಕಾಯ್ದೆಯನ್ನು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಧ್ಯಯನ ನಡೆಸಬೇಕು’ ಎಂದು ಕಾನೂನು ತಜ್ಞ ವೆಂಕಟೇಶರಾವ್ ತಿಳಿಸಿದರು.</p>.<p>ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಕಾರ್ಯದರ್ಶಿ ಪಿ.ನಾರಾಯಣ್, ನಿರ್ದೇಶಕರಾದ ಪಿ.ಮೈಲಾರಪ್ಪ, ಎಂ.ಎಸ್.ಅನಂತದತ್ತ, ಜಿ.ಎನ್.ಸುಧೀರ್, ಎಚ್.ಸಿ.ಶಿವಕುಮಾರ್, ಸೀತಾಲಕ್ಷ್ಮೀ, ಕುಲಸಚಿವ ಎನ್.ಕೆ.ಹರಿಯಪ್ಪ ಉಪಸ್ಥಿತರಿದ್ದರು. ಸಿ.ಎಂ.ನೃಪತುಂಗ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ‘</strong>ಎಲ್ಲ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದೆ. ಹೊಸತನ ಹಾಗೂ ಕಲಿಯುವ ಸೌಜನ್ಯವನ್ನು ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ’ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.</p>.<p>ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎಸ್.ಆರ್.ಎನ್.ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿಗಾಗಿ ಮಂಗಳವಾರ ಏರ್ಪಡಿಸಿದ್ದ ‘ಆಡಳಿತ ನಿರ್ವಹಣೆ - ಕೌಶಲ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಏಕರೂಪವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಿಜವಾದ ಉನ್ನತಿಯಾಗುತ್ತದೆ. ಲೆಕ್ಕಾಚಾರವಿಲ್ಲದ ಬದುಕು ನಿರರ್ಥಕ ಎಂದು ಹೇಳಿದರು.</p>.<p>‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ವಿದ್ಯಾಸಂಸ್ಥೆಯ ಎಲ್ಲ ಸಿಬ್ಬಂದಿ ಜವಾಬ್ದಾರರು. ಅಲ್ಲಿ ಅನುದಾನಿತ ಮತ್ತು ಅನುದಾನರಹಿತ ಎಂಬ ವ್ಯತ್ಯಾಸವಿಲ್ಲ. ಸರ್ಕಾರ ರೂಪಿಸಿರುವ ಶಿಕ್ಷಣ ಕಾಯ್ದೆಯನ್ನು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಧ್ಯಯನ ನಡೆಸಬೇಕು’ ಎಂದು ಕಾನೂನು ತಜ್ಞ ವೆಂಕಟೇಶರಾವ್ ತಿಳಿಸಿದರು.</p>.<p>ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಕಾರ್ಯದರ್ಶಿ ಪಿ.ನಾರಾಯಣ್, ನಿರ್ದೇಶಕರಾದ ಪಿ.ಮೈಲಾರಪ್ಪ, ಎಂ.ಎಸ್.ಅನಂತದತ್ತ, ಜಿ.ಎನ್.ಸುಧೀರ್, ಎಚ್.ಸಿ.ಶಿವಕುಮಾರ್, ಸೀತಾಲಕ್ಷ್ಮೀ, ಕುಲಸಚಿವ ಎನ್.ಕೆ.ಹರಿಯಪ್ಪ ಉಪಸ್ಥಿತರಿದ್ದರು. ಸಿ.ಎಂ.ನೃಪತುಂಗ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>