<p><strong>ಶಿವಮೊಗ್ಗ: </strong>ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದರಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕರ ರೀತಿ ಮಾತನಾಡುತ್ತಿದ್ದಾರೆ. ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ ಎಂಬ ಜ್ಞಾನವೂ ಅವರಿಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಬಂದರೂ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಬದಲು ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದರಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕರ ರೀತಿ ಮಾತನಾಡುತ್ತಿದ್ದಾರೆ. ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ ಎಂಬ ಜ್ಞಾನವೂ ಅವರಿಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಬಂದರೂ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಬದಲು ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>