ಕಾಂಗ್ರೆಸ್ ಪ್ರಮುಖರು ಮಂಗಳವಾರ ಬೆಂಗಳೂರಿಗೆ ತೆರಳಿ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ, ಕಾಗೋಡು ತಿಮ್ಮಪ್ಪ, ಬಿ.ಆರ್. ಜಯಂತ್, ಡಾ.ರಾಜನಂದಿನಿ ಕಾಗೋಡು, ಕಲಗೋಡು ರತ್ನಾಕರ್, ಹೊನಗೋಡು ರತ್ನಾಕರ್ ಅವರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಬೇಳೂರ್ಗೆ ಟಿಕೆಟ್ ನೀಡಿದರೆ ಪಕ್ಷ ಸಂಘಟನೆ ಅಸಾಧ್ಯ ಎಂದು ದೂರಿದ್ದಾಗಿ ತಿಳಿದುಬಂದಿದೆ.