<p>ಶಿವಮೊಗ್ಗ: ಕೊರೊನಾ ಮೊದಲ ಲಾಕ್ಡೌನ್ ವೇಳೆ ಮುಚ್ಚಿದಂತಹ ಅಂಗನವಾಡಿ ಕೇಂದ್ರಗಳು ಒಂದೂವರೆ ವರ್ಷದ ಬಳಿಕ ಸೋಮವಾರದಿಂದ ಆರಂಭಗೊಂಡಿವೆ.</p>.<p>ಕೊರೊನಾ ಕಾರಣ ಒಂದೂವರೆ ವರ್ಷದಿಂದ ಅಂಗನವಾಡಿ ಕೇಂದ್ರಗಳು ಸ್ಥಗಿತವಾಗಿದ್ದವು. ಲಾಕ್ಡೌನ್ ಮತ್ತು ನಂತರದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಹಾಗೂ ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸರ್ಕಾರದ ಯೋಜನೆಗಳನ್ನು ತಲುಪಿಸಿದ್ದರು. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವ ಕಾರಣ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.</p>.<p>ಜಿಲ್ಲೆಯಲ್ಲಿ 2,458 ಅಂಗನವಾಡಿ ಕೇಂದ್ರಗಳಿವೆ. 1,891 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಉಳಿದ 567 ಕಟ್ಟಡಗಳಿಗೆ ಸ್ವಂತ ಸೂರಿಲ್ಲ. ಪಂಚಾಯಿತಿ ಕಟ್ಟಡಗಳಲ್ಲಿ 31, ಶಾಲಾ ಕಟ್ಟಡಗಳಲ್ಲಿ 137, ಸಮುದಾಯ ಭವನದಲ್ಲಿ 58, ಬಾಡಿಗೆ ಕಟ್ಟಡಗಳಲ್ಲಿ 238 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.</p>.<p class="Subhead">ಮಕ್ಕಳಿಗೆ ಸಿಹಿ ವಿತರಿಸಿದ ಪಾಲಿಕೆ ಸದಸ್ಯೆ: ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಮೂರು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಂದ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಮಕ್ಕಳಿಗೆ ಸಿಹಿ ವಿತರಿಸಿ ಸ್ವಾಗತಿಸಿದರು.</p>.<p>ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಲು ಪೋಷಕರು ಭಯಪಡುವ ಅವಶ್ಯಕತೆಯಿಲ್ಲ. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದು, ಪಾಠಪ್ರವಚನ ನಡೆಯಲಿದೆ ಎಂದು ರೇಖಾ ರಂಗನಾಥ್ ತಿಳಿಸಿದರು.</p>.<p>ಯುವ ಮುಖಂಡರಾದ ಕೆ. ರಂಗನಾಥ್, ವಜ್ರೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಸೋಮೇಶ್, ಅಂಗನವಾಡಿ ಕೇಂದ್ರದ ಶಾಂತ ಸಮಾಧಾನ, ಗೌರಮ್ಮ, ಮಕ್ಕಳ ಪೋಷಕರು ಶಿವು ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಕೊರೊನಾ ಮೊದಲ ಲಾಕ್ಡೌನ್ ವೇಳೆ ಮುಚ್ಚಿದಂತಹ ಅಂಗನವಾಡಿ ಕೇಂದ್ರಗಳು ಒಂದೂವರೆ ವರ್ಷದ ಬಳಿಕ ಸೋಮವಾರದಿಂದ ಆರಂಭಗೊಂಡಿವೆ.</p>.<p>ಕೊರೊನಾ ಕಾರಣ ಒಂದೂವರೆ ವರ್ಷದಿಂದ ಅಂಗನವಾಡಿ ಕೇಂದ್ರಗಳು ಸ್ಥಗಿತವಾಗಿದ್ದವು. ಲಾಕ್ಡೌನ್ ಮತ್ತು ನಂತರದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಹಾಗೂ ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸರ್ಕಾರದ ಯೋಜನೆಗಳನ್ನು ತಲುಪಿಸಿದ್ದರು. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವ ಕಾರಣ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.</p>.<p>ಜಿಲ್ಲೆಯಲ್ಲಿ 2,458 ಅಂಗನವಾಡಿ ಕೇಂದ್ರಗಳಿವೆ. 1,891 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಉಳಿದ 567 ಕಟ್ಟಡಗಳಿಗೆ ಸ್ವಂತ ಸೂರಿಲ್ಲ. ಪಂಚಾಯಿತಿ ಕಟ್ಟಡಗಳಲ್ಲಿ 31, ಶಾಲಾ ಕಟ್ಟಡಗಳಲ್ಲಿ 137, ಸಮುದಾಯ ಭವನದಲ್ಲಿ 58, ಬಾಡಿಗೆ ಕಟ್ಟಡಗಳಲ್ಲಿ 238 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.</p>.<p class="Subhead">ಮಕ್ಕಳಿಗೆ ಸಿಹಿ ವಿತರಿಸಿದ ಪಾಲಿಕೆ ಸದಸ್ಯೆ: ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಮೂರು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಂದ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಮಕ್ಕಳಿಗೆ ಸಿಹಿ ವಿತರಿಸಿ ಸ್ವಾಗತಿಸಿದರು.</p>.<p>ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಲು ಪೋಷಕರು ಭಯಪಡುವ ಅವಶ್ಯಕತೆಯಿಲ್ಲ. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದು, ಪಾಠಪ್ರವಚನ ನಡೆಯಲಿದೆ ಎಂದು ರೇಖಾ ರಂಗನಾಥ್ ತಿಳಿಸಿದರು.</p>.<p>ಯುವ ಮುಖಂಡರಾದ ಕೆ. ರಂಗನಾಥ್, ವಜ್ರೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಸೋಮೇಶ್, ಅಂಗನವಾಡಿ ಕೇಂದ್ರದ ಶಾಂತ ಸಮಾಧಾನ, ಗೌರಮ್ಮ, ಮಕ್ಕಳ ಪೋಷಕರು ಶಿವು ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>