ಪ್ರತಿ ಹಳ್ಳಿಯ ಜನರಿಗೆ ಕಾನೂನು ಅರಿವು ಮೂಡಿಸುವುದು. ಮಹಿಳೆಯರು, ಮಕ್ಕಳು, ಹಿಂದುಳಿದವರು, ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು ಮತ್ತು ಇತರರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಲೋಕ ಅದಾಲತ್, ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ಉಚಿತ ಮತ್ತು ಶೀಘ್ರ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಿ ಶೀಘ್ರ ನ್ಯಾಯದಾನ ಮಾಡಲಾಗುತ್ತಿದೆ’ ಎಂದರು.