‘ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ನಮ್ಮನ್ನು ಸಾಂಸ್ಕೃತಿಕ ಗುಲಾಮಗಿರಿಯಿಂದ ಹೊರತಂದಿದೆ. ನಮ್ಮ ಪ್ರಜಾಪ್ರಭುತ್ವ ಧರ್ಮಾಕ್ರಸಿ ಆಗುತ್ತದೆ ಎನ್ನುವ ಆತಂಕ ಜನಸಾಮಾನ್ಯರಲ್ಲಿದೆ. ಶೇ 15ರಷ್ಟು ಇರುವ ಮನುವಾದಿಗಳು ಶೇ 85ರಷ್ಟು ಇರುವ ದಲಿತರು ಮತ್ತು ಹಿಂದುಳಿದವರ ಸ್ವಾಭಿಮಾನ ಕೆಣಕುತ್ತಿದ್ದು, ಇದೇ ಧೋರಣೆ ಮುಂದುವರಿದರೆ ಪ್ರತಿರೋಧ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಡಿಎಸ್ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಶಿವಬಸಪ್ಪ, ಎ. ಅರ್ಜುನ್, ಎಂ. ಏಳುಕೋಟಿ, ರಾಘವೇಂದ್ರ ಜೋಗಿಹಳ್ಳಿ, ಅತ್ತಿಗುಂದ ಕರಿಯಪ್ಪ, ಎಂ. ರವಿ ಹರಿಗೆ, ಎಂ. ರಮೇಶ್ ಚಿಕ್ಕಮರಡಿ, ಹನುಮಂತಪ್ಪ ಇದ್ದರು.