ಶಿವಮೊಗ್ಗ ನಗರದಲ್ಲಿ ನ.27ರಂದು ಸನಾತನ ಹಿಂದೂ ಸಮಾಜ ಪರಿಷತ್ ಪೂಜ್ಯ ಭಾರತ ಕಾರ್ಯಕ್ರಮದಡಿ ‘ಕನಕದಾಸ ಜಯಂತಿ ಮಹೋತ್ಸವ’ ಹಮ್ಮಿಕೊಂಡಿದೆ. ಇದು ಸ್ವಾಗತಾರ್ಹ. ಆದರೆ, ವಿಧಾನಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಮಯದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಅವರ ಸಂಚಾಲಕತ್ವದಲ್ಲಿ ನಡೆಸುತ್ತಿರುವುದು ಎಷ್ಟು ಸರಿ? ಇದುವರೆಗೂ ನೆನಪಾಗದ ಕನಕದಾಸರು ಚುನಾವಣಾ ಸಮಯದಲ್ಲೇ ಏಕೆ ನೆನಪಾದರು ಎಂದು ವೇದಿಕೆಯ ಅಧ್ಯಕ್ಷ ಸೋಮು, ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂದನ್ ಪ್ರಶ್ನಿಸಿದ್ದಾರೆ.