<p><strong>ಸಾಗರ: ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಮುದಾಯ ಭವನದ ಶ್ರೀಧರ ಪ್ರಣೀತ ಯೋಗ ವೇದಿಕೆಯಲ್ಲಿ ಜೂನ್ 6ರಿಂದ 8ರವರೆಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದೆ ಎಂದು ಶ್ರೀ ಗುರುಕುಲಂ ಯೋಗ ವಿದ್ಯಾ ಕೇಂದ್ರದ ಶ್ರೀಧರಮೂರ್ತಿ ಕಾನುಗೋಡು ತಿಳಿಸಿದ್ದಾರೆ.</strong></p>.<p><strong>ರಾಜ್ಯದ ವಿವಿಧ ಜಿಲ್ಲೆಗಳಿಂದ 425 ಯೋಗ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಜೂನ್ 6ರಂದು ಸಂಜೆ 7ಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</strong></p>.<p><strong>ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ವಿಕಾಸ್ ವಿ. ಸಿ.ಕೆ.ರಾಘವೇಂದ್ರ, ಜಲೀಲ್ ಸಾಗರ್, ಸಾನ್ವಿ ಜಿ.ಭಟ್, ಕಾವ್ಯ ಕೆ.ಎನ್. ನಮನ ಎಸ್. ಚಂದನ್ ಕೆ.ಆರ್. ಸಂಧ್ಯಾ ಎಂ.ಎಸ್. ಅವರನ್ನು ಸನ್ಮಾನಿಸಲಾಗುವುದು ಎಂದರು.</strong></p>.<p><strong>ಜೂನ್ 7ರಂದು ವಿವಿಧ ವಯೋಮಾನದವರಿಗೆ ಯೋಗ ಸ್ಪರ್ಧೆ ನಡೆಯಲಿದೆ. ಇಲ್ಲಿ ವಿಜೇತರಾದವರು ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುತ್ತಾರೆ ಎಂದು ಅವರು ತಿಳಿಸಿದರು.</strong></p>.<p><strong>ಪ್ರಮುಖರಾದ ಕೃಷ್ಣಮೂರ್ತಿ ಗಡಿಕಟ್ಟೆ, ಗೌತಮ್ ಕೆ.ಎಸ್. ಪ್ರಶಾಂತ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಮುದಾಯ ಭವನದ ಶ್ರೀಧರ ಪ್ರಣೀತ ಯೋಗ ವೇದಿಕೆಯಲ್ಲಿ ಜೂನ್ 6ರಿಂದ 8ರವರೆಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದೆ ಎಂದು ಶ್ರೀ ಗುರುಕುಲಂ ಯೋಗ ವಿದ್ಯಾ ಕೇಂದ್ರದ ಶ್ರೀಧರಮೂರ್ತಿ ಕಾನುಗೋಡು ತಿಳಿಸಿದ್ದಾರೆ.</strong></p>.<p><strong>ರಾಜ್ಯದ ವಿವಿಧ ಜಿಲ್ಲೆಗಳಿಂದ 425 ಯೋಗ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಜೂನ್ 6ರಂದು ಸಂಜೆ 7ಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</strong></p>.<p><strong>ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ವಿಕಾಸ್ ವಿ. ಸಿ.ಕೆ.ರಾಘವೇಂದ್ರ, ಜಲೀಲ್ ಸಾಗರ್, ಸಾನ್ವಿ ಜಿ.ಭಟ್, ಕಾವ್ಯ ಕೆ.ಎನ್. ನಮನ ಎಸ್. ಚಂದನ್ ಕೆ.ಆರ್. ಸಂಧ್ಯಾ ಎಂ.ಎಸ್. ಅವರನ್ನು ಸನ್ಮಾನಿಸಲಾಗುವುದು ಎಂದರು.</strong></p>.<p><strong>ಜೂನ್ 7ರಂದು ವಿವಿಧ ವಯೋಮಾನದವರಿಗೆ ಯೋಗ ಸ್ಪರ್ಧೆ ನಡೆಯಲಿದೆ. ಇಲ್ಲಿ ವಿಜೇತರಾದವರು ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುತ್ತಾರೆ ಎಂದು ಅವರು ತಿಳಿಸಿದರು.</strong></p>.<p><strong>ಪ್ರಮುಖರಾದ ಕೃಷ್ಣಮೂರ್ತಿ ಗಡಿಕಟ್ಟೆ, ಗೌತಮ್ ಕೆ.ಎಸ್. ಪ್ರಶಾಂತ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>