<p>ರಿಪ್ಪನ್ಪೇಟೆ: ಮುಳುಗಡೆ ಸಂತ್ರಸ್ತರನ್ನು ಒಕ್ಕಲೆಬ್ಬಿಸುವುದಕ್ಕೂ ಮೊದಲು ಪ್ರಭಾವಿ ರಾಜಕಾರಣಿಗಳ ನೂರಾರು ಎಕರೆ ಒತ್ತುವರಿ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಲಿ ಎಂದು ಮುಳುಗಡೆ ಸಂತ್ರಸ್ತರು ಆಗ್ರಹಿಸಿದರು.</p>.<p>ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಬಗರ್ಹುಕುಂ ರೈತರ ಸಮಸ್ಯೆ ಆಲಿಸಲು ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಗ್ರಾಮಸ್ಥರು ಸರ್ಕಾರದ ವಿರುದ್ಧ ಹರಿಹಾಯ್ದರು.</p>.<p>ರಾಜ್ಯಕ್ಕೆ ಬೆಳಕು ನೀಡಲು ದಶಕಗಳ ಹಿಂದೆ ಮನೆ, ಮಠ ಕಳೆದುಕೊಂಡು ಅತಂತ್ರ ಬದುಕು ನಡೆಸುತ್ತಿದ್ದೇವೆ. ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ಒತ್ತುವರಿ ಮಾಡಿಕೊಂಡರೆ ತಪ್ಪೇನು ಎಂದು ಸಭೆಯಲ್ಲಿ ಪ್ರಶ್ನಿಸಿದರು.<br /><br /> ಇದಕ್ಕೆ ಉತ್ತರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ರೈತರ ಹಿತ ಕಾಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಸುಪ್ರೀಂ ಕೋರ್ಟ್ನಲ್ಲಿ ಸಮರ್ಥ ವಾದ ಮಂಡಿಸಲು ಶ್ರೇಷ್ಠ ವಕೀಲರನ್ನು ನೇಮಿಸಲಾಗಿದೆ ಎಂದರು.<br /><br />ವನ್ಯಜೀವಿಗೆ ಮೀಸಲಿಟ್ಟ ಅರಣ್ಯದಲ್ಲಿ ಒತ್ತುವರಿಗೆ ಇಲಾಖೆ ಅವಕಾಶ ನೀಡುವುದಿಲ್ಲ. ಕಾಡು ಪ್ರಾಣಿಗಳ ರಕ್ಷಣೆ ಎಲ್ಲರ ಹೊಣೆ ಎಂದು <br /> ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟಗಾರ ತಿಳಿಸಿದರು. </p>.<p>ಎಸಿಎಫ್ ಸುರೇಶ್, ಮುಗುಡ್ತಿ ವನ್ಯಜೀವಿ ವಿಭಾಗದ ಆರ್ಎಫ್ ಪವನ್ ಕುಮಾರ್, ಮುಖಂಡರಾದ ಕಲಗೋಡು ರತ್ನಾಕರ, ರಾಮಚಂದ್ರ, ಬುಕ್ಕಿವರೆ ದೇವೇಂದ್ರಪ್ಪ ಗೌಡ, ಕಾನುಗೊಡು ಉಮಾಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಪ್ಪನ್ಪೇಟೆ: ಮುಳುಗಡೆ ಸಂತ್ರಸ್ತರನ್ನು ಒಕ್ಕಲೆಬ್ಬಿಸುವುದಕ್ಕೂ ಮೊದಲು ಪ್ರಭಾವಿ ರಾಜಕಾರಣಿಗಳ ನೂರಾರು ಎಕರೆ ಒತ್ತುವರಿ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಲಿ ಎಂದು ಮುಳುಗಡೆ ಸಂತ್ರಸ್ತರು ಆಗ್ರಹಿಸಿದರು.</p>.<p>ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಬಗರ್ಹುಕುಂ ರೈತರ ಸಮಸ್ಯೆ ಆಲಿಸಲು ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಗ್ರಾಮಸ್ಥರು ಸರ್ಕಾರದ ವಿರುದ್ಧ ಹರಿಹಾಯ್ದರು.</p>.<p>ರಾಜ್ಯಕ್ಕೆ ಬೆಳಕು ನೀಡಲು ದಶಕಗಳ ಹಿಂದೆ ಮನೆ, ಮಠ ಕಳೆದುಕೊಂಡು ಅತಂತ್ರ ಬದುಕು ನಡೆಸುತ್ತಿದ್ದೇವೆ. ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ಒತ್ತುವರಿ ಮಾಡಿಕೊಂಡರೆ ತಪ್ಪೇನು ಎಂದು ಸಭೆಯಲ್ಲಿ ಪ್ರಶ್ನಿಸಿದರು.<br /><br /> ಇದಕ್ಕೆ ಉತ್ತರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ರೈತರ ಹಿತ ಕಾಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಸುಪ್ರೀಂ ಕೋರ್ಟ್ನಲ್ಲಿ ಸಮರ್ಥ ವಾದ ಮಂಡಿಸಲು ಶ್ರೇಷ್ಠ ವಕೀಲರನ್ನು ನೇಮಿಸಲಾಗಿದೆ ಎಂದರು.<br /><br />ವನ್ಯಜೀವಿಗೆ ಮೀಸಲಿಟ್ಟ ಅರಣ್ಯದಲ್ಲಿ ಒತ್ತುವರಿಗೆ ಇಲಾಖೆ ಅವಕಾಶ ನೀಡುವುದಿಲ್ಲ. ಕಾಡು ಪ್ರಾಣಿಗಳ ರಕ್ಷಣೆ ಎಲ್ಲರ ಹೊಣೆ ಎಂದು <br /> ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟಗಾರ ತಿಳಿಸಿದರು. </p>.<p>ಎಸಿಎಫ್ ಸುರೇಶ್, ಮುಗುಡ್ತಿ ವನ್ಯಜೀವಿ ವಿಭಾಗದ ಆರ್ಎಫ್ ಪವನ್ ಕುಮಾರ್, ಮುಖಂಡರಾದ ಕಲಗೋಡು ರತ್ನಾಕರ, ರಾಮಚಂದ್ರ, ಬುಕ್ಕಿವರೆ ದೇವೇಂದ್ರಪ್ಪ ಗೌಡ, ಕಾನುಗೊಡು ಉಮಾಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>