25 ವರ್ಷಗಳ ಹಿಂದೆ 2 ಕುಟುಂಬಗಳು ಗ್ರಾಮದಲ್ಲಿ ಮನೆ ಕಟ್ಟಿಕೊಂಡು ಜೀವನ ಸಾಗಿಸುತ್ತಿವೆ. ಈ ಎರಡೂ ಕುಟುಂಬದವರು ದಿನನಿತ್ಯದ ಕೆಲಸಕ್ಕಾಗಿ ಪಕ್ಕದ ಮನೆಯ ಹಿತ್ತಲನ್ನು ಅವಲಂಬಿಸಿದ್ದಾರೆ. ದೇವರಾಜ್ ಹಾಗೂ ಬೇಲಿ ಹಾಕಿರುವ ಗಂಗಾಧರ್ ಕುಟುಂಬದ ನಡುವೆ ಪಂಚಾಯಿತಿ ಮಾಡಿ ದಾರಿ ಬೀಡಬೇಕು ಎಂದು ತೀರ್ಮಾನಿಸಲಾಗಿತ್ತು. ಆದರೂ ಇಲ್ಲಿಯವರೆಗೆ ದಾರಿ ಬಿಟ್ಟುಕೊಡದೆ ಬೆಲಿ ಹಾಕಲಾಗಿದೆ. ಇದು ಗ್ರಾಮ ಠಾಣಾಗೆ ಸೇರಿದ ಜಾಗವಾಗಿದ್ದರೂ ದಾರಿಗಾಗಿ ಎರಡೂ ಕುಟುಂಬಗಳ ನಡುವೆ ವಾಗ್ವಾದ ನಡೆಯುತ್ತಿದೆ.