<p><strong>ಶಿವಮೊಗ್ಗ</strong>: ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದಲ್ಲಿ ಭಾನುವಾರ ಸೈಕಲ್ ಜಾಥಾ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸೈಕಲ್ ಜಾಥಾ ಉದ್ಘಾಟಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ‘ಸೈಕಲ್ ಬಳಸುವುದರಿಂದ ನಮ್ಮ ದೇಹದ ಪ್ರತಿಯೊಂದು ಭಾಗ ಆರೋಗ್ಯವಾಗಿರುತ್ತದೆ. ಪರಿಸರಕ್ಕೆ ಪೂರಕವಾಗಿರುವ ಸೈಕಲ್ ಬಳಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ’ ಎಂದು ಹೇಳಿದರು.</p>.<p>‘ಶಿವಮೊಗ್ಗ ಸೈಕಲ್ ಕ್ಲಬ್ನ 156ನೇ ಕಾರ್ಯಕ್ರಮ ಇದಾಗಿದ್ದು, ಸಕ್ರಿಯವಾಗಿ ನಗರದಲ್ಲಿ ಸೈಕಲ್ ಬಳಕೆ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಕ್ಲಬ್ನ ಕಾರ್ಯ ಶ್ಲಾಘನೀಯ. ಈ ವೇಳೆ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಸಮಾಜಕ್ಕೆ ಉತ್ತಮ ಕೊಡುಗೆ’ ಎಂದು ಶ್ಲಾಘಿಸಿದರು.</p>.<p>ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಮಾತನಾಡಿ, ‘ನಗರದ ನಾಗರಿಕರ ಸಹಕಾರದಿಂದ ಸಂದರ್ಭಕ್ಕೆ ಅನುಕೂಲವಾಗುವ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ವರ್ಷದಲ್ಲಿ ಎರಡು ಬಾರಿ ಮೇ ಮತ್ತು ನವೆಂಬರ್ ಒಂದರಂದು ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಪದಾಧಿಕಾರಿಗಳಾದ ಗಿರೀಶ್ ಕಾಮತ್, ನರಸಿಂಹಮೂರ್ತಿ, ಮಹಮ್ಮದ್ ರಫಿ, ವಿಜಯಕುಮಾರ್, ಹರೀಶ್ ಪಾಟೀಲ್, ವಾಗೇಶ್, ಸಾಹಸ ಅಕಾಡೆಮಿಯ ವಿಜಯೇಂದ್ರ ರಾವ್, ರಕ್ತದಾನಿ ಧರಣೇಂದ್ರ ದಿನಕರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದಲ್ಲಿ ಭಾನುವಾರ ಸೈಕಲ್ ಜಾಥಾ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸೈಕಲ್ ಜಾಥಾ ಉದ್ಘಾಟಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ‘ಸೈಕಲ್ ಬಳಸುವುದರಿಂದ ನಮ್ಮ ದೇಹದ ಪ್ರತಿಯೊಂದು ಭಾಗ ಆರೋಗ್ಯವಾಗಿರುತ್ತದೆ. ಪರಿಸರಕ್ಕೆ ಪೂರಕವಾಗಿರುವ ಸೈಕಲ್ ಬಳಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ’ ಎಂದು ಹೇಳಿದರು.</p>.<p>‘ಶಿವಮೊಗ್ಗ ಸೈಕಲ್ ಕ್ಲಬ್ನ 156ನೇ ಕಾರ್ಯಕ್ರಮ ಇದಾಗಿದ್ದು, ಸಕ್ರಿಯವಾಗಿ ನಗರದಲ್ಲಿ ಸೈಕಲ್ ಬಳಕೆ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಕ್ಲಬ್ನ ಕಾರ್ಯ ಶ್ಲಾಘನೀಯ. ಈ ವೇಳೆ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಸಮಾಜಕ್ಕೆ ಉತ್ತಮ ಕೊಡುಗೆ’ ಎಂದು ಶ್ಲಾಘಿಸಿದರು.</p>.<p>ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಮಾತನಾಡಿ, ‘ನಗರದ ನಾಗರಿಕರ ಸಹಕಾರದಿಂದ ಸಂದರ್ಭಕ್ಕೆ ಅನುಕೂಲವಾಗುವ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ವರ್ಷದಲ್ಲಿ ಎರಡು ಬಾರಿ ಮೇ ಮತ್ತು ನವೆಂಬರ್ ಒಂದರಂದು ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಪದಾಧಿಕಾರಿಗಳಾದ ಗಿರೀಶ್ ಕಾಮತ್, ನರಸಿಂಹಮೂರ್ತಿ, ಮಹಮ್ಮದ್ ರಫಿ, ವಿಜಯಕುಮಾರ್, ಹರೀಶ್ ಪಾಟೀಲ್, ವಾಗೇಶ್, ಸಾಹಸ ಅಕಾಡೆಮಿಯ ವಿಜಯೇಂದ್ರ ರಾವ್, ರಕ್ತದಾನಿ ಧರಣೇಂದ್ರ ದಿನಕರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>