<p><strong>ಶಿವಮೊಗ್ಗ: </strong>ಸುರಿಯುವ ಮಳೆಯಲ್ಲಿ, ಕೊರೆವ ಚಳಿಯಲ್ಲಿ ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದುಎಂದು ಡಾ.ಧನಂಜಯ ಸರ್ಜಿ ಹೇಳಿದರು.</p>.<p>ನಗರದಲ್ಲಿ ಭಾನುವಾರದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ದಿನಪತ್ರಿಕೆ ವಿತರಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಪತ್ರಿಕಾ ವಿತರಕರಾಗಿದ್ದ ಅಬ್ದುಲ್ ಕಲಾಂ ಎಂಜಿನಿಯರ್ ಆಗಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿ ಸ್ಥಾನ ಅಲಂಕರಿಸಿದರು. ಜೀವನದಲ್ಲಿ ಡ್ರೀಮ್, ಡೇಟ್, ಡಿಕ್ಲೇರ್ ಮತ್ತು ಡೆಡಿಕೇಶನ್ ಎಂಬ ನಾಲ್ಕು ‘ಡಿ’ ಸೂತ್ರ ಅಳವಡಿಸಿಕೊಂಡಾಗ ಸಾಧನೆಗೆ ಸಮಸ್ಯೆಗಳು ಅಡ್ಡಿಯಾಗುವುದಿಲ್ಲ ಎಂದು ಸಲಹೆ ನೀಡಿದರು.</p>.<p>‘ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಕನಸು ನನಸು ಮಾಡಿಕೊಳ್ಳುವ ಛಲದಿಂದ ತಕ್ಕ ಸಿದ್ಧತೆ ಮತ್ತು ವಿಚಾರಧಾರೆಯಿಂದ ಮುನ್ನಡೆದರೆ ಅಸಾಧ್ಯವೂ ಸಾಧ್ಯ’ ಎಂದು ಹೇಳಿದರು.</p>.<p>‘ಪತ್ರಿಕಾ ವಿತರಕರಿಗೆ ಆರೋಗ್ಯ ಅತಿಮುಖ್ಯ. ನಿಮ್ಮ ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ, ನಿಮ್ಮ ಸವಲತ್ತು ನೀವೇ ಪಡೆದುಕೊಳ್ಳಬಹುದು. ಸಂಘವನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಇಎಸ್ಐ ಸೌಲಭ್ಯ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>‘ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಲ ಉದ್ದೇಶ ಕ್ಷೇಮ ಮತ್ತು ಅಭಿವೃದ್ಧಿ. ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟ ಸಾಗರದ ಪತ್ರಿಕಾ ವಿತರಕನಿಗೆ ಸಂಘವೇ ₹ 2 ಲಕ್ಷ ಪರಿಹಾರ ನೀಡಿದೆ. ಈ<br />ರೀತಿಯ ಸಹಾಯಗಳು ಸಂಘ ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯವಾಗುತ್ತದೆ’ ಎಂದು ಶಾಸಕ ಎಸ್.ರುದ್ರೇಗೌಡ ತಿಳಿಸಿದರು.</p>.<p>ಪತ್ರಕರ್ತರಾದ ಗೋಪಾಲ್ ಎಸ್. ಯಡಗೆರೆ, ಸೂರ್ಯನಾರಾಯಣ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಹಲವು ವರ್ಷಗಳಿಂದ ದಿನಪತ್ರಿಕೆ ವಿತರಿಸುತ್ತಿರುವ ಸಂಜಯ್, ಪ್ರಕಾಶ್, ಸತ್ಯನಾರಾಯಣ್, ಗಿಡ್ಡೇಶ್, ಕೈಷ್ಣಮೂರ್ತಿ, ರಮೇಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಅಧ್ಯಕ್ಷತೆಯನ್ನು ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸತ್ಯನಾರಾಯಣ ವಹಿಸಿಕೊಂಡಿದ್ದರು. ಪ್ರಸರಣ ವಿಭಾಗದ ಪ್ರಮುಖರಾದ ಕೆ.ಎನ್.ಸತೀಶ್, ಸಂಘದ ಗೌರವಾಧ್ಯಕ್ಷ ಗಣೇಶ್ ಭಟ್, ಯೋಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸುರಿಯುವ ಮಳೆಯಲ್ಲಿ, ಕೊರೆವ ಚಳಿಯಲ್ಲಿ ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದುಎಂದು ಡಾ.ಧನಂಜಯ ಸರ್ಜಿ ಹೇಳಿದರು.</p>.<p>ನಗರದಲ್ಲಿ ಭಾನುವಾರದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ದಿನಪತ್ರಿಕೆ ವಿತರಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಪತ್ರಿಕಾ ವಿತರಕರಾಗಿದ್ದ ಅಬ್ದುಲ್ ಕಲಾಂ ಎಂಜಿನಿಯರ್ ಆಗಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿ ಸ್ಥಾನ ಅಲಂಕರಿಸಿದರು. ಜೀವನದಲ್ಲಿ ಡ್ರೀಮ್, ಡೇಟ್, ಡಿಕ್ಲೇರ್ ಮತ್ತು ಡೆಡಿಕೇಶನ್ ಎಂಬ ನಾಲ್ಕು ‘ಡಿ’ ಸೂತ್ರ ಅಳವಡಿಸಿಕೊಂಡಾಗ ಸಾಧನೆಗೆ ಸಮಸ್ಯೆಗಳು ಅಡ್ಡಿಯಾಗುವುದಿಲ್ಲ ಎಂದು ಸಲಹೆ ನೀಡಿದರು.</p>.<p>‘ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಕನಸು ನನಸು ಮಾಡಿಕೊಳ್ಳುವ ಛಲದಿಂದ ತಕ್ಕ ಸಿದ್ಧತೆ ಮತ್ತು ವಿಚಾರಧಾರೆಯಿಂದ ಮುನ್ನಡೆದರೆ ಅಸಾಧ್ಯವೂ ಸಾಧ್ಯ’ ಎಂದು ಹೇಳಿದರು.</p>.<p>‘ಪತ್ರಿಕಾ ವಿತರಕರಿಗೆ ಆರೋಗ್ಯ ಅತಿಮುಖ್ಯ. ನಿಮ್ಮ ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ, ನಿಮ್ಮ ಸವಲತ್ತು ನೀವೇ ಪಡೆದುಕೊಳ್ಳಬಹುದು. ಸಂಘವನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಇಎಸ್ಐ ಸೌಲಭ್ಯ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>‘ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಲ ಉದ್ದೇಶ ಕ್ಷೇಮ ಮತ್ತು ಅಭಿವೃದ್ಧಿ. ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟ ಸಾಗರದ ಪತ್ರಿಕಾ ವಿತರಕನಿಗೆ ಸಂಘವೇ ₹ 2 ಲಕ್ಷ ಪರಿಹಾರ ನೀಡಿದೆ. ಈ<br />ರೀತಿಯ ಸಹಾಯಗಳು ಸಂಘ ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯವಾಗುತ್ತದೆ’ ಎಂದು ಶಾಸಕ ಎಸ್.ರುದ್ರೇಗೌಡ ತಿಳಿಸಿದರು.</p>.<p>ಪತ್ರಕರ್ತರಾದ ಗೋಪಾಲ್ ಎಸ್. ಯಡಗೆರೆ, ಸೂರ್ಯನಾರಾಯಣ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಹಲವು ವರ್ಷಗಳಿಂದ ದಿನಪತ್ರಿಕೆ ವಿತರಿಸುತ್ತಿರುವ ಸಂಜಯ್, ಪ್ರಕಾಶ್, ಸತ್ಯನಾರಾಯಣ್, ಗಿಡ್ಡೇಶ್, ಕೈಷ್ಣಮೂರ್ತಿ, ರಮೇಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಅಧ್ಯಕ್ಷತೆಯನ್ನು ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸತ್ಯನಾರಾಯಣ ವಹಿಸಿಕೊಂಡಿದ್ದರು. ಪ್ರಸರಣ ವಿಭಾಗದ ಪ್ರಮುಖರಾದ ಕೆ.ಎನ್.ಸತೀಶ್, ಸಂಘದ ಗೌರವಾಧ್ಯಕ್ಷ ಗಣೇಶ್ ಭಟ್, ಯೋಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>