ಶುಕ್ರವಾರ, ಮಾರ್ಚ್ 31, 2023
25 °C

ಸಿಂಹಧಾಮದಲ್ಲಿ ನೀಲ್‌ಗಾಯ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಾಣಿಗಳ ಪರಸ್ಪರ ಜಗಳದಿಂದ ಒಂದು ನೀಲ್‌ಗಾಯ್‌ ಮೃತಪಟ್ಟಿದೆ.

ನೀಲ್‌ಗಾಯ್‌ ಅನ್ನು ಎರಡು ವರ್ಷಗಳ ಹಿಂದೆ ಮೈಸೂರು ಮೃಗಾಲಯದಿಂದ ತರಲಾಗಿತ್ತು. ಸಿಂಹಧಾಮದಲ್ಲಿ ಈಚೆಗಷ್ಟೇ ಜಿಂಕೆಗಳು ಹಾಗೂ ನೀಲ್‍ಗಾಯ್‌ಗಳಿಗಾಗಿ ಪ್ರತ್ಯೇಕವಾಗಿ ಕೇಜ್‌ಗಳನ್ನು ನಿರ್ಮಾಣ ಮಾಡಲಾಗಿತ್ತು. ಜಿಂಕೆಗಳ ಕೇಜ್‌ನಿಂದ ನೀಲ್‌ಗಾಯ್‌ಗಳನ್ನು ಸ್ಥಳಾಂತರ ಮಾಡುವ ಸಂದರ್ಭದಲ್ಲಿ ಒಂದು ನೀಲ್‌ಗಾಯ್‌ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ನೀಲ್‌ಗಾಯ್‌ ಸಾವಿಗೆ ಪರಸ್ಪರ ಜಗಳವೇ ಕಾರಣ ಎಂದೂ ಹೇಳಲಾಗುತ್ತಿದೆ.

ನೀಲ್‌ಗಾಯ್‌ ಮೃತಪಟ್ಟು ಮೂರು ದಿನಗಳು ಕಳೆದಿವೆ. ಪಶುವೈದ್ಯ ಡಾ.ರಾಜೇಶ್ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಅಂಗಾಂಗಳ ಮಾದರಿಯನ್ನು ಬೆಂಗಳೂರಿನ ಹೆಬ್ಬಾಳ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಸಿಂಹಧಾಮದಲ್ಲಿ 19 ನೀಲ್‌ಗಾಯ್‌ಗಳಿದ್ದು, ಈಗ ಅವುಗಳ ಸಂಖ್ಯೆ 18ಕ್ಕೆ ಇಳಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.