‘ಕರ್ನಾಟಕದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕ್ಷೇತ್ರದ ದಿಗ್ಗಜರಾದ ಮಲ್ಲಿಕಾರ್ಜುನ ಮನ್ಸೂರ್, ಭೀಮಸೇನ ಜೋಷಿ, ಗಂಗೂಬಾಯಿ ಹಾನಗಲ್, ಕುಮಾರ ಗಂಧರ್ವ, ಪಂಡಿತ ಬಸವರಾಜ ರಾಜಗುರು ಅವರನ್ನು ಒಂದು ಘರಾನಾಕ್ಕೆ ಸೀಮಿತಗೊಳಿಸುವುದು ಸರಿಯೇ’ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸೃಜನಶೀಲತೆಯೇ ಸಂಗೀತದ ಜೀವಾಳ. ಈ ದಿಗ್ಗಜರೆಲ್ಲ ತಮ್ಮ ಸೃಜನಶೀಲ ಪ್ರತಿಕ್ರಿಯೆಯ ಮೂಲಕವೇ ಘರಾನಾಗಳ ಮಿತಿಯನ್ನು ದಾಟಿದ್ದಾರೆ’ ಎಂದು ಹೇಳಿದರು.