ಕೇಂದ್ರದ ಯೋಜನೆಗಳಿಗೆ ಅಡ್ಡಗಾಲು: ಸೈನಿಕರಿಗೆ ನೀಡುವಷ್ಟೇ ಗೌರವವನ್ನು ಮೋದಿ ದೇಶದ ರೈತರಿಗೂ ನೀಡುತ್ತಿದ್ದಾರೆ. ರೈತರಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ರೈತ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದಾರೆ. ಮೊದಲ ಕಂತಿನಲ್ಲಿ 3 ಕೋಟಿ ರೈತರ ಖಾತೆಗಳಿಗೆ ತಲಾ ₹ 2 ಸಾವಿರ ಹಣ ಜಮೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರದ ಅಸಹಕಾರದ ಪರಿಣಾಮ ಇಲ್ಲಿನ 17 ರೈತರಿಗೆ ಮಾತ್ರ ಯೋಜನೆಯ ಫಲ ದೊರಕಿದೆ. ಕೇಂದ್ರದ ಯೋಜನೆಗಳಿಗೆ ರಾಜ್ಯ ಅಡ್ಡಗಾಲು ಹಾಕುತ್ತಿದೆ ಎಂದರು.