<p><strong>ಶಂಕರಘಟ್ಟ</strong>: ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ನಲ್ಲಿ ನಡೆಯುವ 31ನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿಸಿದ್ದಾರೆ.</p>.<p>ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ ನಿಯೋಗ ಗುರುವಾರ ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಘಟಿಕೋತ್ಸವಕ್ಕೆ ಆಹ್ವಾನ ನೀಡಿತು. ಅಕ್ಟೋಬರ್ ಕೊನೆಯ ವಾರ ಘಟಿಕೋತ್ಸವ ನಿಗದಿಯಾಗಲಿದೆ.</p>.<p>ಕೋವಿಡ್ ನಿಯಮಗಳು ಸಡಿಲಗೊಂಡಿವೆ. ಹಾಗಾಗಿ, ಈ ಬಾರಿ ಆಯ್ದ ಪ್ರಮುಖರ ಸಮ್ಮುಖದಲ್ಲಿ ಈ ಬಾರಿಯ ಘಟಿಕೋತ್ಸವ ನಡೆಯಲಿದೆ. ಹಣಕಾಸು ಸಚಿವರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುತ್ತಿರುವುದು ಸಂತಸದ ವಿಷಯ ಎಂದು ಕುಲಪತಿ ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದರು.</p>.<p>ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಎಸ್.ಎನ್.ಯೋಗೀಶ್, ಕುವೆಂಪು ವಿಶ್ವವಿದ್ಯಾಲಯದ ದೆಹಲಿ ಪ್ರತಿನಿಧಿ ರಾಜಶೇಖರ್ ಸವಣೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಂಕರಘಟ್ಟ</strong>: ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ನಲ್ಲಿ ನಡೆಯುವ 31ನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿಸಿದ್ದಾರೆ.</p>.<p>ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ ನಿಯೋಗ ಗುರುವಾರ ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಘಟಿಕೋತ್ಸವಕ್ಕೆ ಆಹ್ವಾನ ನೀಡಿತು. ಅಕ್ಟೋಬರ್ ಕೊನೆಯ ವಾರ ಘಟಿಕೋತ್ಸವ ನಿಗದಿಯಾಗಲಿದೆ.</p>.<p>ಕೋವಿಡ್ ನಿಯಮಗಳು ಸಡಿಲಗೊಂಡಿವೆ. ಹಾಗಾಗಿ, ಈ ಬಾರಿ ಆಯ್ದ ಪ್ರಮುಖರ ಸಮ್ಮುಖದಲ್ಲಿ ಈ ಬಾರಿಯ ಘಟಿಕೋತ್ಸವ ನಡೆಯಲಿದೆ. ಹಣಕಾಸು ಸಚಿವರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುತ್ತಿರುವುದು ಸಂತಸದ ವಿಷಯ ಎಂದು ಕುಲಪತಿ ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದರು.</p>.<p>ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಎಸ್.ಎನ್.ಯೋಗೀಶ್, ಕುವೆಂಪು ವಿಶ್ವವಿದ್ಯಾಲಯದ ದೆಹಲಿ ಪ್ರತಿನಿಧಿ ರಾಜಶೇಖರ್ ಸವಣೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>