2020–21ನೇ ಸಾಲಿನಲ್ಲಿ ರಾಜ್ಯ 2,705 ಲೆಕ್ಕ ಶೀರ್ಷಿಕೆಯಡಿ ಹೊಲಗಾಲುವೆ, ಬಸಿಗಾಲುವೆ, ಆಯಕಟ್ಟು ರಸ್ತೆ, ಭೂ ಸುಧಾರಣೆ, ಸಂಘದ ವರ್ಷದ ಕಾರ್ಯಾನುದಾನ, ಸಂಘದ ಪದಾಧಿಕಾರಿಗಳಿಗೆ ನೀಡುವ ತರಬೇತಿ ಹಾಗೂ ನಬಾರ್ಡ್ ಯೋಜನೆಗಳಿಗೆ ಒಟ್ಟು ₹ 16.29 ಕೋಟಿ ಅನುದಾನ ಹಂಚಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು ₹ 13.04 ಕೋಟಿ ಅನುದಾನ ಬಳಕೆಯಾಗಿದೆ. ಕೇಂದ್ರ ಯೋಜಿತಎಸ್ಡಿಪಿ ಯೋಜನೆಯಡಿ ಹೊಲಗಾಲುವೆ, ಬಸಿಗಾಲುವೆ, ಆಯಕಟ್ಟು ರಸ್ತೆ, ಭೂ ಸುಧಾರಣೆ ಕಾಮಗಾರಿಗಳಿಗೆ ₹ 5.96 ಕೋಟಿ ಅನುದಾನ ಮಂಜೂರಾಗಿದೆ. ಸಂಪೂರ್ಣ ಕಾರ್ಯಸಾಧನೆ ಮಾಡಲಾಗಿದೆ ಎಂದು ‘ಕಾಡಾ’ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾಹಿತಿನೀಡಿದರು.